<p><strong>ನವದೆಹಲಿ: </strong>ಔಷಧೋಪಚಾರಗಳ ನೆರವಿಲ್ಲದೇಕೋವಿಡ್ 19 ವಿರುದ್ಧದ ಹೋರಾಡಲು ಸಮುದಾಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ (ಹರ್ಡ್ ಇಮ್ಯುನಿಟಿ) ಪ್ರಯತ್ನದಿಂದಸಮುದಾಯದಲ್ಲಿ ರೋಗದ ಪ್ರಮಾಣ ಉಲ್ಬಣಗೊಂಡು, ಸಾವಿನ ಪ್ರಮಾಣವೂ ಹೆಚ್ಚಾಗುವ ಅಪಾಯವಿದೆ ಎಂದು ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.</p>.<p>‘ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡಲು ರಾಜ್ಯ ಸರ್ಕಾರಗಳು ಸಮುದಾಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ ಕ್ರಮಗಳನ್ನು ಅನುಸರಿಸುತ್ತಿವೆಯೇ' ಎಂದು ಕೇಳಿದ ಪ್ರಶ್ನೆಗೆ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.</p>.<p>‘ಕೋವಿಡ್19 ಸೋಂಕಿನ ಆರಂಭಿಕ ಹಂತದಲ್ಲಿ, ಕೆಲವು ದೇಶಗಳು ಸ್ವಾಭಾವಿಕವಾಗಿ ಸಮುದಾಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಪ್ರಕ್ರಿಯೆಗೆ ಅವಕಾಶ ನೀಡಿದ್ದವು. ಅಂಥ ದೇಶಗಳಲ್ಲಿ ಸೋಂಕು ಹರಡುವ ಪ್ರಮಾಣ ಹೆಚ್ಚಾಗಿ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಯಿತು. ನಂತರ ಈ ವಿಧಾವನ್ನು ಅಲ್ಲಿ ಕೈಬಿಡಲಾಯಿತು‘ ಎಂದು ಚೌಬೆ ತಿಳಿಸಿದ್ದಾರೆ.</p>.<p>ಸೋಂಕು ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ಆರೋಗ್ಯ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಯೋಜನೆಗಳು, ಕಾರ್ಯವಿಧಾನ ಗಳು, ಸಲಹೆಗಳನ್ನು ನೀಡಿದೆ. ಈ ಕ್ರಮಗಳನ್ನು ಅನುಸರಿಸುವುದರಿಂದ ಸೋಂಕು ಹರಡುವುದು ತಪ್ಪುತ್ತದೆ‘ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಔಷಧೋಪಚಾರಗಳ ನೆರವಿಲ್ಲದೇಕೋವಿಡ್ 19 ವಿರುದ್ಧದ ಹೋರಾಡಲು ಸಮುದಾಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ (ಹರ್ಡ್ ಇಮ್ಯುನಿಟಿ) ಪ್ರಯತ್ನದಿಂದಸಮುದಾಯದಲ್ಲಿ ರೋಗದ ಪ್ರಮಾಣ ಉಲ್ಬಣಗೊಂಡು, ಸಾವಿನ ಪ್ರಮಾಣವೂ ಹೆಚ್ಚಾಗುವ ಅಪಾಯವಿದೆ ಎಂದು ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.</p>.<p>‘ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡಲು ರಾಜ್ಯ ಸರ್ಕಾರಗಳು ಸಮುದಾಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ ಕ್ರಮಗಳನ್ನು ಅನುಸರಿಸುತ್ತಿವೆಯೇ' ಎಂದು ಕೇಳಿದ ಪ್ರಶ್ನೆಗೆ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.</p>.<p>‘ಕೋವಿಡ್19 ಸೋಂಕಿನ ಆರಂಭಿಕ ಹಂತದಲ್ಲಿ, ಕೆಲವು ದೇಶಗಳು ಸ್ವಾಭಾವಿಕವಾಗಿ ಸಮುದಾಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಪ್ರಕ್ರಿಯೆಗೆ ಅವಕಾಶ ನೀಡಿದ್ದವು. ಅಂಥ ದೇಶಗಳಲ್ಲಿ ಸೋಂಕು ಹರಡುವ ಪ್ರಮಾಣ ಹೆಚ್ಚಾಗಿ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಯಿತು. ನಂತರ ಈ ವಿಧಾವನ್ನು ಅಲ್ಲಿ ಕೈಬಿಡಲಾಯಿತು‘ ಎಂದು ಚೌಬೆ ತಿಳಿಸಿದ್ದಾರೆ.</p>.<p>ಸೋಂಕು ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ಆರೋಗ್ಯ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಯೋಜನೆಗಳು, ಕಾರ್ಯವಿಧಾನ ಗಳು, ಸಲಹೆಗಳನ್ನು ನೀಡಿದೆ. ಈ ಕ್ರಮಗಳನ್ನು ಅನುಸರಿಸುವುದರಿಂದ ಸೋಂಕು ಹರಡುವುದು ತಪ್ಪುತ್ತದೆ‘ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>