ಕೊಚ್ಚಿ (ಪಿಟಿಐ): ಶಾರ್ಜಾದಿಂದ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ, ಹೈಡ್ರಾಲಿಕ್ ವೈಫಲ್ಯದ ಶಂಕೆಯ ಮೇರೆಗೆ ಕೊಚ್ಚಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಭಾನುವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ಹೇಳಿದ್ದಾರೆ.
ರಾತ್ರಿ 8.04ರ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಿದ್ದು, ಬಳಿಕ ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು. ವಿಮಾನದಲ್ಲಿ 193 ಮಂದಿ ಪ್ರಯಾಣಿಕರು, ಆರು ಮಂದಿ ಸಿಬ್ಬಂದಿ ಇದ್ದರು ಎಂದೂ ತಿಳಿಸಿದ್ದಾರೆ.