ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ ಇಂಡಿಯ ವಿಮಾನ; ಅಡಚಣೆ ಕಾರಣ ತುರ್ತು ಭೂಸ್ಪರ್ಶ

Last Updated 4 ಜನವರಿ 2023, 19:46 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಿಂದ ಪ್ಯಾರಿಸ್‌ಗೆ ಹೊರಟಿದ್ದ ಏರ್‌ ಇಂಡಿಯ ವಿಮಾನದಲ್ಲಿ ಬುಧವಾರ ತಾಂತ್ರಿಕ ಅಡಚಣೆ ಕಂಡುಬಂದ ಕಾರಣ ದೆಹಲಿ ವಿಮಾನ ನಿಲ್ದಾಣಕ್ಕೆ ಹಿಂದಿರುಗಿ ತುರ್ತು ಭೂಸ್ಪರ್ಶ ಮಾಡಿತು.

ಮಧ್ಯಾಹ್ನ 1.30ಕ್ಕೆ ಈ ವಿಮಾನವು ದೆಹಲಿಯಿಂದ ಟೇಕ್‌ ಆಫ್‌ ಆಗಿತ್ತು. ಸುಮಾರು 2.25ರ ವೇಳಗೆ ವಿಮಾನ ನಿಲ್ದಾಣಕ್ಕೆ ಹಿಂದಿರುಗಿದೆ. ಅಡಚಣೆ ಉಂಟಾಗುತ್ತಿರುವುದಾಗಿ ಸೂಚನೆ ಸಿಗುತ್ತಿದ್ದಂತೆ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ಇದರಲ್ಲಿ ಸುಮಾರು 210 ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಏರ್‌ ಇಂಡಿಯ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT