ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂತ್ರ ವಿಸರ್ಜನೆ ಪ್ರಕರಣ : ಆರೋಪಿ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

Last Updated 30 ಜನವರಿ 2023, 12:41 IST
ಅಕ್ಷರ ಗಾತ್ರ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಎದುರಿಸುತ್ತಿರುವ ಆರೋಪಿ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯ ಸೋಮವಾರ ಜ. 31ಕ್ಕೆ ಕಾಯ್ದಿರಿಸಿದೆ.

ಈ ಘಟನೆಯಿಂದಾಗಿ ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನಹಾನಿಯಾಗಿದೆ ಎಂದು ಪೊಲೀಸರು ಜಾಮೀನು ಅರ್ಜಿ ವಿರೋಧಿಸಿದ್ದಾರೆ.

‘ಇದು ಅಸಹ್ಯವಾಗಿರಬಹುದು. ಆದರೆ, ಅದು ಬೇರೆ ವಿಷಯ. ಕಾನೂನು ಅದನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ನೋಡೋಣ. ‌ಪ್ರಾಸಿಕ್ಯೂಷನ್ ಹೆಸರಿಸಿರುವ ಸಾಕ್ಷಿಗಳು ‘ನಿಮ್ಮ (ಪೊಲೀಸರ) ಪರವಾಗಿ ಹಾಜರಾಗುತ್ತಿಲ್ಲ’ ಎಂದು ನ್ಯಾಯಮೂರ್ತಿಗಳು ಹೇಳಿದರು.

ಆರೋಪಿಗಳು ದೂರುದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT