ಉತ್ತರಪ್ರದೇಶ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿರುವ ಕಲ್ಲಿದ್ದಲಿನ 10 ಉಷ್ಣ ವಿದ್ಯುತ್ ಸ್ಥಾವರಗಳಿಂದ ದೇಶದ ರಾಜಧಾನಿ ದೆಹಲಿಯಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಈ ಸ್ಥಾವರಗಳು ‘ಫ್ಲೂ ಗ್ಯಾಸ್ ಡೆಸಲ್ಫುರೈಸೇಷನ್’ ತಂತ್ರಜ್ಞಾನ ಅಳವಡಿಸಿಕೊಳ್ಳುವವರೆಗೆ ಸ್ಥಾವರಗಳ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ದೆಹಲಿ ಸರ್ಕಾರಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.