ನಿರ್ಬಂಧಗಳ ನಡುವೆಯೂ ದೀಪಾವಳಿ ಹಿನ್ನೆಲೆಯಲ್ಲಿ ವಿಪರೀತವಾಗಿ ಪಟಾಕಿಗಳನ್ನು ಸಿಡಿಸಿದ ಪರಿಣಾಮ, ದೆಹಲಿಯ ಗಾಳಿಯ ಗುಣಮಟ್ಟ ಗುರುವಾರ ಕಳಪೆಯಾಗಿತ್ತು. ಕಳೆದ ಐದು ವರ್ಷಗಳಿಗೆ ಹೋಲಿಸಿದರೆ, ಈ ಬಾರಿ ವಾಯು ಮಾಲಿನ್ಯ ಅಧಿಕವಾಗಿತ್ತು. ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದು ಸಹ ಮಾಲಿನ್ಯ ಹೆಚ್ಚಲು ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.