ಸೆಪ್ಟೆಂಬರ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ನಡೆಸಲು ಮಾಕೆನ್ ಮತ್ತು ಖರ್ಗೆ ಅವರು ಕೇಂದ್ರ ವೀಕ್ಷಕರಾಗಿ ಜೈಪುರಕ್ಕೆ ತೆರಳಿದ್ದರು. ಆದರೆ, ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಪರವಾಗಿ ಎರಡೂ ಬಣಗಳ ಆರೋಪ ಮತ್ತು ಪ್ರತ್ಯಾರೋಪ, ಪ್ರತ್ಯೇಕ ಸಭೆಗಳಿಂದಾಗಿ ಶಾಸಕಾಂಗ ಪಕ್ಷದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿಗೆ ನಿಷ್ಠರಾಗಿರುವ ಕೆಲ ಶಾಸಕರು ರಾಜ್ಯದ ಸಚಿವಶಾಂತಿ ಧರಿವಾಲ್ ಅವರ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸುವ ಮೂಲಕ ಗೆಹಲೋತ್ ಉತ್ತರಾಧಿಕಾರಿಯನ್ನಾಗಿ ಪೈಲಟ್ ಅವರನ್ನು ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.