ಎನ್ಸಿಪಿ ವರಿಷ್ಠ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್, ಎಂವಿಎ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಹಾಗೂ ಯೋಜನಾ ಖಾತೆ ಸಚಿವರಾಗಿದ್ದಾರೆ. ‘ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಅನುದಾನವನ್ನು ತಡೆಹಿಡಿಯುವ ಮೂಲಕ ಕಾಂಗ್ರೆಸ್ ಶಾಸಕರು ಹಾಗೂ ಸಚಿವರಿಗೆ ಅಜಿತ್ ಪವಾರ್ ಕಿರುಕುಳ ನೀಡುತ್ತಿದ್ದಾರೆ’ ಎಂದು ಪಟೋಲೆ ಟೀಕಿಸಿದ್ದಾರೆ.