<p><strong>ಗುವಾಹಟಿ:</strong> ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಜೈಲಿನಲ್ಲಿರುವ ಸಿಎಎ ವಿರೋಧಿ ಕಾರ್ಯಕರ್ತ ಅಖಿಲ್ ಗೊಗೊಯ್ ನೇತೃತ್ವದ ರೈಜೊರ್ ದಳದೊಂದಿಗೆ ಅಸ್ಸಾಂ ಜತೀಯ ಪರಿಷದ್(ಎಜೆಪಿ) ಪಕ್ಷವು ಮೈತ್ರಿ ಮಾಡಿಕೊಂಡಿದೆ ಎಂದು ಎಜೆಪಿ ಪಕ್ಷದ ಮುಖ್ಯಸ್ಥ ಲುರಿನ್ಜ್ಯೋತಿ ಗೊಗೊಯ್ ಅವರು ಗುರುವಾರ ತಿಳಿಸಿದರು.</p>.<p>ಈ ಸಂಬಂಧ ಗುವಾಹಟಿ ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ನಲ್ಲಿ(ಜಿಎಂಸಿಎಚ್) ಲುರಿನ್ಜ್ಯೋತಿ ಮತ್ತು ಅಖಿಲ್ ಗೊಗೊಯ್, ಎರಡೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದರು. ಅಖಿಲ್ ಗೊಗೊಯ್ ಜಿಎಂಸಿಎಚ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಈ ವೇಳೆ ಮಾತನಾಡಿದ ಅಖಿಲ್, ‘ಎರಡು ಪ್ರಾದೇಶಿಕ ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. ಈ ಬಗ್ಗೆ ಅಧಿಕೃತ ಘೋಷಣೆಯನ್ನು ಶೀಘ್ರದಲ್ಲಿ ಮಾಡಲಾಗುವುದು’ ಎಂದರು.</p>.<p>ಕಳೆದ ತಿಂಗಳು ಈ ಬಗ್ಗೆ ರೈಜೊರ್ ದಳವು ಲುರಿನ್ಜ್ಯೋತಿ ಗೊಗೊಯ್ ಅವರಿಗೆ ಪತ್ರವನ್ನು ಬರೆದಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/india-news/we-have-taken-several-steps-in-the-interest-of-farmer-says-pm-narendra-modi-802278.html" target="_blank">ರೈತರ ಹಿತಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ: ಪ್ರಧಾನಿ ಮೋದಿ</a></strong></p>.<p>‘ನಾವು ಆಡಳಿತರೂಢ ಬಿಜೆಪಿ ಪಕ್ಷದ ವಿರುದ್ಧ ಒಗ್ಗಟಾಗಿ ಹೋರಾಡಲು ನಿರ್ಧರಿಸಿದ್ದೇವೆ. ಹಾಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಉಭಯ ಪಕ್ಷಗಳ ನಾಯಕರ ಸಮ್ಮುಖದಲ್ಲಿ ಆದಷ್ಟು ಬೇಗ ಈ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಲಿದ್ದೇವೆ’ ಎಂದು ಲುರಿನ್ಜ್ಯೋತಿ ಅವರು ತಿಳಿಸಿದರು.</p>.<p>‘ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರುವ ಬುಲಂದ್ ಪೀಪಲ್ಸ್ ಫ್ರಂಟ್(ಬಿಪಿಎಫ್) ಪಕ್ಷದ ಜತೆಗೂ ಮೈತ್ರಿ ಬಗ್ಗೆ ಮಾತನಾಡಿದ್ದೇವೆ. ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಜೈಲಿನಲ್ಲಿರುವ ಸಿಎಎ ವಿರೋಧಿ ಕಾರ್ಯಕರ್ತ ಅಖಿಲ್ ಗೊಗೊಯ್ ನೇತೃತ್ವದ ರೈಜೊರ್ ದಳದೊಂದಿಗೆ ಅಸ್ಸಾಂ ಜತೀಯ ಪರಿಷದ್(ಎಜೆಪಿ) ಪಕ್ಷವು ಮೈತ್ರಿ ಮಾಡಿಕೊಂಡಿದೆ ಎಂದು ಎಜೆಪಿ ಪಕ್ಷದ ಮುಖ್ಯಸ್ಥ ಲುರಿನ್ಜ್ಯೋತಿ ಗೊಗೊಯ್ ಅವರು ಗುರುವಾರ ತಿಳಿಸಿದರು.</p>.<p>ಈ ಸಂಬಂಧ ಗುವಾಹಟಿ ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ನಲ್ಲಿ(ಜಿಎಂಸಿಎಚ್) ಲುರಿನ್ಜ್ಯೋತಿ ಮತ್ತು ಅಖಿಲ್ ಗೊಗೊಯ್, ಎರಡೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದರು. ಅಖಿಲ್ ಗೊಗೊಯ್ ಜಿಎಂಸಿಎಚ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಈ ವೇಳೆ ಮಾತನಾಡಿದ ಅಖಿಲ್, ‘ಎರಡು ಪ್ರಾದೇಶಿಕ ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. ಈ ಬಗ್ಗೆ ಅಧಿಕೃತ ಘೋಷಣೆಯನ್ನು ಶೀಘ್ರದಲ್ಲಿ ಮಾಡಲಾಗುವುದು’ ಎಂದರು.</p>.<p>ಕಳೆದ ತಿಂಗಳು ಈ ಬಗ್ಗೆ ರೈಜೊರ್ ದಳವು ಲುರಿನ್ಜ್ಯೋತಿ ಗೊಗೊಯ್ ಅವರಿಗೆ ಪತ್ರವನ್ನು ಬರೆದಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/india-news/we-have-taken-several-steps-in-the-interest-of-farmer-says-pm-narendra-modi-802278.html" target="_blank">ರೈತರ ಹಿತಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ: ಪ್ರಧಾನಿ ಮೋದಿ</a></strong></p>.<p>‘ನಾವು ಆಡಳಿತರೂಢ ಬಿಜೆಪಿ ಪಕ್ಷದ ವಿರುದ್ಧ ಒಗ್ಗಟಾಗಿ ಹೋರಾಡಲು ನಿರ್ಧರಿಸಿದ್ದೇವೆ. ಹಾಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಉಭಯ ಪಕ್ಷಗಳ ನಾಯಕರ ಸಮ್ಮುಖದಲ್ಲಿ ಆದಷ್ಟು ಬೇಗ ಈ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಲಿದ್ದೇವೆ’ ಎಂದು ಲುರಿನ್ಜ್ಯೋತಿ ಅವರು ತಿಳಿಸಿದರು.</p>.<p>‘ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರುವ ಬುಲಂದ್ ಪೀಪಲ್ಸ್ ಫ್ರಂಟ್(ಬಿಪಿಎಫ್) ಪಕ್ಷದ ಜತೆಗೂ ಮೈತ್ರಿ ಬಗ್ಗೆ ಮಾತನಾಡಿದ್ದೇವೆ. ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>