ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. 'ರಾಕೇಶ್ ಜುಂಝನ್ವಾಲಾ ಅವರು ಅದಮ್ಯ ವ್ಯಕ್ತಿ. ಅವರ ಸಂಪೂರ್ಣ ಬದುಕು ವಿನೋದ ಮತ್ತು ಗಾಂಭೀರ್ಯತೆ ಕೂಡಿದ್ದು, ಆರ್ಥಿಕ ವಲಯಕ್ಕೆ ಅಳಿಸಲಾಗದ ಕೊಡುಗೆಯನ್ನು ಕೊಟ್ಟು ಹೋಗಿದ್ದಾರೆ. ಭಾರತದ ಪ್ರಗತಿಗೆ ಸದಾ ದೃಢ ಸಂಕಲ್ಪ ಹೊಂದಿದ್ದರು. ಅವರ ಅಗಲಿಕೆ ಬೇಸರವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ಮತ್ತು ಹಿತೈಷಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ' ಎಂದಿದ್ದಾರೆ.