ಗುವಾಹಟಿ: 2019ರಲ್ಲಿ ತನಿಖಾಧಿಕಾರಿಗಳು ತಮಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿ ಕಾರ್ಯಕರ್ತ, ಈಗ ನ್ಯಾಯಾಂಗ ಬಂಧನದಲ್ಲಿ ಇರುವ ಅಖಿಲ್ ಗೊಗೊಯ್ ಅವರು ಹೇಳಿದ್ದಾರೆ. ನ್ಯಾಯಾಂಗ ಬಂಧನದಿಂದಲೇ ಅವರು ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಸಿಎಎ ಮತ್ತು ದೊಡ್ಡ ಅಣೆಕಟ್ಟೆಗಳ ವಿರುದ್ಧದ ಹೋರಾಟ ಕೈಬಿಡುವಂತೆ ಅವರು ಬೆದರಿಸಿದ್ದರು; ಹೋರಾಟ ಕೈಬಿಟ್ಟು ಆರ್ಎಸ್ಎಸ್–ಬಿಜೆಪಿ ಸೇರಿದರೆ ಸಚಿವನನ್ನಾಗಿ ಮಾಡಲಾಗುವುದು ಎಂದು ಆಮಿಷ ಒಡ್ಡಿದ್ದರು ಎಂದು ಅಖಿಲ್ ಮಂಗಳವಾರ ಆರೋಪಿಸಿದ್ದಾರೆ.