ಪತ್ರಕರ್ತ ನೀಡಿದ ದೂರು ಆಧರಿಸಿ ಪಕ್ವಾರಾ ಠಾಣೆಯಲ್ಲಿ ಶುಕ್ರವಾರ ರಾತ್ರಿ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಮಾರ್ಚ್ 11ರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಕೆಲ ಪ್ರಶ್ನೆಗಳಿಂದ ಅಖಿಲೇಶ್ ಯಾದವ್ ಇರಿಸುಮುರಿಸಿಗೆ ಒಳಗಾದರು. ಇದರಿಂದ ವಿಚಲಿತರಾದ ಅವರ ಬೆಂಬಲಿಗರು, ಭದ್ರತಾ ಸಿಬ್ಬಂದಿ ಹಲ್ಲೆ ಮಾಡಿದರು ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕೆಲ ಪತ್ರಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.