ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನದ ವೇಳೆಗೆ ಸಮಾಜವಾದಿ ಪಕ್ಷ (ಎಸ್ಪಿ) ನೇತೃತ್ವದ ಮೈತ್ರಿಕೂಟವು 200ಕ್ಕೂ ಅಧಿಕಸ್ಥಾನಗಳಲ್ಲಿ ಗೆಲುವು ದಾಖಲಿಸಲಿದೆಎಂದು ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಭರವಸೆ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದಲ್ಲಿ 59 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆದಿದೆ.
ಸಮಾಜವಾದಿ ಪಕ್ಷ ನೇತೃತ್ವದ ಮೈತ್ರಿಕೂಟದ ಐತಿಹಾಸಿಕ ಗೆಲುವನ್ನು ಖಾತ್ರಿಪಡಿಸುವುದುಮತದಾರರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಅಖಿಲೇಶ್, 12ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ಲ್ಯಾಪ್ಟಾಪ್ ನೀಡುವ ಪೊಳ್ಳು ಭರವಸೆಯನ್ನು ನೀಡಿದ್ದಾರೆ ಎಂದು ಟೀಕೆ ಮಾಡಿದರು.