‘ವಾರಾಣಸಿಯ ಜಿಲ್ಲಾಧಿಕಾರಿಯು ಅಭ್ಯರ್ಥಿಗಳಿಗೆ ಮಾಹಿತಿ ನೀಡದೆಯೇ ಇವಿಎಂಗಳನ್ನು ಸಾಗಿಸುತ್ತಿದ್ದಾರೆ. ಹೀಗೆ ಇವಿಎಂಗಳನ್ನು ಸಾಗಿಸಿದರೆ ಅಭ್ಯರ್ಥಿಗಳಿಗೆ ತಿಳಿಸಬೇಕು. ಚುನಾವಣಾ ಆಯೋಗ ಈ ಬಗ್ಗೆ ಗಮನಿಸಬೇಕು. ನಾವು ನಮ್ಮ ಮತಗಳನ್ನು ರಕ್ಷಿಸಬೇಕು. ನಾವು ಇದರ ವಿರುದ್ಧವಾಗಿ ನ್ಯಾಯಾಲಯಕ್ಕೆ ಹೋಗಬಹುದು. ಆದರೆ, ಅದಕ್ಕೂ ಮೊದಲು ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಬೇಕು ಎಂದು ನಾನು ಜನರಿಗೆ ಮನವಿ ಮಾಡುತ್ತೇನೆ. ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷ ಗೆಲ್ಲುತ್ತಿದೆ. ಅದನ್ನು ತಡೆಯಲೆಂದೇ ಚುನಾವಣಾ ಆಯೋಗದ ಅಧಿಕಾರಿಗಳು. ಇವಿಎಂ ಅಕ್ರಮದಲ್ಲಿ ತೊಡಗಿದ್ದಾರೆ’ ಎಂದು ಅಖಿಲೇಶ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ‘ಎಎನ್ಐ’ ವರದಿ ಪ್ರಕಟಿಸಿದೆ.