ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸಂಪುಟದಲ್ಲಿ ಸಚಿವರಾಗಿದ್ದ, ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮತ್ತೊಬ್ಬ ಸಚಿವ ಮತ್ತು ಆರು ಶಾಸಕರ ಜೊತೆ ಎಸ್ಪಿಗೆ ಶುಕ್ರವಾರ ಸೇರಿದರು. ಅವರೆಲ್ಲರೂ ಎಸ್ಪಿ ಟಿಕೆಟ್ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.ಮತ್ತೊಬ್ಬ ಸಚಿವ ದಾರಾ ಸಿಂಗ್ ಚೌಹಾನ್ ಇತ್ತೀಚೆಗಷ್ಟೇ ಯೋಗಿ ಆದಿತ್ಯನಾಥ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕೂಡಾ ಎಸ್ಪಿಯಿಂದ ಸ್ಪರ್ಧಿಸಬಹುದು ಎನ್ನಲಾಗಿದೆ.