<p><strong>ಲಖನೌ:</strong> ಮುಂಬರುವ ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಎಸ್ಪಿ ವರಿಷ್ಠೆ ಮಾಯಾವತಿ ಅವರ ದಲಿತ ವೋಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದಾರೆ. ಬಿಎಸ್ಪಿಯ ಮಾಜಿ ನಾಯಕರನ್ನು ಪಕ್ಷಕ್ಕೆ ಸೆಳಯಲು ಉತ್ಸುಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಬಿಎಸ್ಪಿಯ ಉಚ್ಚಾಟಿತ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿರುವ ಅಖಿಲೇಶ್, ಆ ನಾಯಕರಿಗೆ ಅವರು ಈ ಹಿಂದೆ ಪ್ರತಿನಿಧಿಸಿದ್ದ ಕ್ಷೇತ್ರದಿಂದಲೇ ಸ್ಪರ್ಧಿಸಲು ಅವಕಾಶ ನೀಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ಹೇಳಿವೆ.</p>.<p>ಬಿಸ್ಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ಸುಖ್ದೇವ್ ರಾಜ್ಭರ್ ಅವರ ಪುತ್ರ ಕೆಲ ದಿನಗಳ ಹಿಂದಷ್ಟೇ ಎಸ್ಪಿ ಸೇರಿದ್ದಾರೆ. ಅಜಮಾಗಡ ಜಿಲ್ಲೆಯ ದಿದ್ರಾಗಂಜ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರಾಜ್ಭರ್ ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/akhilesh-yadav-says-doors-of-sp-open-to-all-small-parties-for-2022-up-polls-853707.html" itemprop="url">ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಸೋಲಿಸಲು ಒಗ್ಗಟ್ಟಾಗೋಣ ಎಂದ ಅಖಿಲೇಶ್ ಯಾದವ್</a></p>.<p>ಬಿಎಸ್ಪಿ ತನ್ನ ಸಿದ್ಧಾಂತದಿಂದ ದೂರ ಸರಿದಿದೆ ಎಂದು ಬಹಿರಂಗ ಪತ್ರದ ಮೂಲಕ ಮಾಯಾವತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಪುತ್ರನಿಗೆ ಎಸ್ಪಿಯೇ ಸೂಕ್ತ ಎಂದು ಹೇಳಿದ್ದರು.</p>.<p>ಬಿಎಸ್ಪಿಯಿಂದ ಉಚ್ಚಾಟಿತರಾಗಿರುವ ಲಾಲ್ಜಿ ವರ್ಮಾ, ರಾಮ್ ಅಚಲ್ ರಾಜ್ಭರ್ ಅವರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳಲು ಎಸ್ಪಿ ಉತ್ಸುಕವಾಗಿದೆ ಎಂದು ಮೂಲಗಳು ಹೇಳಿವೆ.</p>.<p>‘ಅವರ ಜತೆ ಮಾತುಕತೆ ನಡೆಸುತ್ತಿದ್ದೇವೆ. ಅವರ ಕ್ಷೇತ್ರಗಳನ್ನು ಅವರಿಗೇ ಬಿಟ್ಟುಕೊಡುವ ಬಗ್ಗೆ ನಮ್ಮ ತಕರಾರಿಲ್ಲ’ ಎಂದು ಎಸ್ಪಿಯ ಹಿರಿಯ ನಾಯಕರೊಬ್ಬರು ‘ಡೆಕ್ಕನ್ ಹೆರಾಲ್ಡ್’ಗೆ ತಿಳಿಸಿದ್ದಾರೆ.</p>.<p>‘ಬಿಎಸ್ಪಿಯ ಈ ಮಾಜಿ ನಾಯಕರು ಅವರ ಸಮುದಾಯಗಳಲ್ಲಿ ಭಾರಿ ಬೆಂಬಲ ಹೊಂದಿದ್ದಾರೆ. ಅವರಿಗೆ ಅರ್ಹ ಗೌರವ ನೀಡಲಿದ್ದೇವೆ’ ಎಂದೂ ಎಸ್ಪಿ ನಾಯಕ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/uttar-pradesh-assembly-election-bsp-launches-inaugural-brahmin-sammelan-from-ayodhya-850915.html" itemprop="url">ಉತ್ತರ ಪ್ರದೇಶ ಚುನಾವಣೆ: ಬ್ರಾಹ್ಮಣ ಸಮ್ಮೇಳನಕ್ಕೆ ಅಯೋಧ್ಯೆಯಿಂದ ಬಿಎಸ್ಪಿ ಚಾಲನೆ</a></p>.<p>ಈ ಮಧ್ಯೆ, ಆರು ಮಂದಿ ಬಿಎಸ್ಪಿ ಶಾಸಕರು ಈಗಾಗಲೇ ಎಸ್ಪಿ ಸೇರಿದ್ದಾರೆ ಎನ್ನಲಾಗಿದೆ. 2022ರಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಈಗಾಗಲೇ ಚುರುಕುಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮುಂಬರುವ ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಎಸ್ಪಿ ವರಿಷ್ಠೆ ಮಾಯಾವತಿ ಅವರ ದಲಿತ ವೋಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದಾರೆ. ಬಿಎಸ್ಪಿಯ ಮಾಜಿ ನಾಯಕರನ್ನು ಪಕ್ಷಕ್ಕೆ ಸೆಳಯಲು ಉತ್ಸುಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಬಿಎಸ್ಪಿಯ ಉಚ್ಚಾಟಿತ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿರುವ ಅಖಿಲೇಶ್, ಆ ನಾಯಕರಿಗೆ ಅವರು ಈ ಹಿಂದೆ ಪ್ರತಿನಿಧಿಸಿದ್ದ ಕ್ಷೇತ್ರದಿಂದಲೇ ಸ್ಪರ್ಧಿಸಲು ಅವಕಾಶ ನೀಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ಹೇಳಿವೆ.</p>.<p>ಬಿಸ್ಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ಸುಖ್ದೇವ್ ರಾಜ್ಭರ್ ಅವರ ಪುತ್ರ ಕೆಲ ದಿನಗಳ ಹಿಂದಷ್ಟೇ ಎಸ್ಪಿ ಸೇರಿದ್ದಾರೆ. ಅಜಮಾಗಡ ಜಿಲ್ಲೆಯ ದಿದ್ರಾಗಂಜ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರಾಜ್ಭರ್ ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/akhilesh-yadav-says-doors-of-sp-open-to-all-small-parties-for-2022-up-polls-853707.html" itemprop="url">ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಸೋಲಿಸಲು ಒಗ್ಗಟ್ಟಾಗೋಣ ಎಂದ ಅಖಿಲೇಶ್ ಯಾದವ್</a></p>.<p>ಬಿಎಸ್ಪಿ ತನ್ನ ಸಿದ್ಧಾಂತದಿಂದ ದೂರ ಸರಿದಿದೆ ಎಂದು ಬಹಿರಂಗ ಪತ್ರದ ಮೂಲಕ ಮಾಯಾವತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಪುತ್ರನಿಗೆ ಎಸ್ಪಿಯೇ ಸೂಕ್ತ ಎಂದು ಹೇಳಿದ್ದರು.</p>.<p>ಬಿಎಸ್ಪಿಯಿಂದ ಉಚ್ಚಾಟಿತರಾಗಿರುವ ಲಾಲ್ಜಿ ವರ್ಮಾ, ರಾಮ್ ಅಚಲ್ ರಾಜ್ಭರ್ ಅವರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳಲು ಎಸ್ಪಿ ಉತ್ಸುಕವಾಗಿದೆ ಎಂದು ಮೂಲಗಳು ಹೇಳಿವೆ.</p>.<p>‘ಅವರ ಜತೆ ಮಾತುಕತೆ ನಡೆಸುತ್ತಿದ್ದೇವೆ. ಅವರ ಕ್ಷೇತ್ರಗಳನ್ನು ಅವರಿಗೇ ಬಿಟ್ಟುಕೊಡುವ ಬಗ್ಗೆ ನಮ್ಮ ತಕರಾರಿಲ್ಲ’ ಎಂದು ಎಸ್ಪಿಯ ಹಿರಿಯ ನಾಯಕರೊಬ್ಬರು ‘ಡೆಕ್ಕನ್ ಹೆರಾಲ್ಡ್’ಗೆ ತಿಳಿಸಿದ್ದಾರೆ.</p>.<p>‘ಬಿಎಸ್ಪಿಯ ಈ ಮಾಜಿ ನಾಯಕರು ಅವರ ಸಮುದಾಯಗಳಲ್ಲಿ ಭಾರಿ ಬೆಂಬಲ ಹೊಂದಿದ್ದಾರೆ. ಅವರಿಗೆ ಅರ್ಹ ಗೌರವ ನೀಡಲಿದ್ದೇವೆ’ ಎಂದೂ ಎಸ್ಪಿ ನಾಯಕ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/uttar-pradesh-assembly-election-bsp-launches-inaugural-brahmin-sammelan-from-ayodhya-850915.html" itemprop="url">ಉತ್ತರ ಪ್ರದೇಶ ಚುನಾವಣೆ: ಬ್ರಾಹ್ಮಣ ಸಮ್ಮೇಳನಕ್ಕೆ ಅಯೋಧ್ಯೆಯಿಂದ ಬಿಎಸ್ಪಿ ಚಾಲನೆ</a></p>.<p>ಈ ಮಧ್ಯೆ, ಆರು ಮಂದಿ ಬಿಎಸ್ಪಿ ಶಾಸಕರು ಈಗಾಗಲೇ ಎಸ್ಪಿ ಸೇರಿದ್ದಾರೆ ಎನ್ನಲಾಗಿದೆ. 2022ರಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಈಗಾಗಲೇ ಚುರುಕುಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>