<p><strong>ಬಲಿಯಾ, ಉತ್ತರ ಪ್ರದೇಶ: </strong>ಮುಸ್ಲಿಮರ ಮತಗಳನ್ನು ಪಡೆಯುವಾಗ ಸಲುವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತಾಂತರವಾಗಲೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶ ಸಚಿವ ಆನಂದಸ್ವರೂಪ್ ಶುಕ್ಲ ಆರೋಪಿಸಿದರು.</p>.<p>ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಖಿಲೇಶ್ ಯಾದವ್ಗೆ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐ ಬೆಂಬಲ ಇದೆ. ಐಎಸ್ಐನಿಂದ ಆರ್ಥಿಕ ನೆರವನ್ನೂ ಪಡೆಯುತ್ತಿರಬಹುದು’ ಎಂದು ಆರೋಪಿಸಿದರು.</p>.<p>‘ಇಸ್ಲಾಮಿಕ್ ಜಗತ್ತಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸವಾಲಾಗಿ ಪರಿಣಮಿಸಿದ್ದಾರೆ. ಹೀಗಾಗಿ ಅಖಿಲೇಶ್ ಯಾದವ್ ಮುಸ್ಲಿಮರ ಬೆಂಬಲ ಪಡೆಯುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಹರ್ದೋಯಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಖಿಲೇಶ್, ಮಹಾತ್ಮಗಾಂಧಿ, ಸರ್ದಾರ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರು ಅವರಂತೆ ಮುಹಮ್ಮದ್ ಅಲಿ ಜಿನ್ನಾ ಅವರೂ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು’ ಎಂದು ಹೇಳಿದ್ದರು.</p>.<p>ಅಖಿಲೇಶ್ ಯಾದವ್ ಅವರ ಈ ಹೇಳಿಕೆಗೆ ಭಾರಿ ಟೀಕೆಗಳು ವ್ಯಕ್ತವಾಗಿದ್ದವು. ಈಗ ಸಚಿವ ಶುಕ್ಲ ಅವರಿಂದಲೂ ಟೀಕೆ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲಿಯಾ, ಉತ್ತರ ಪ್ರದೇಶ: </strong>ಮುಸ್ಲಿಮರ ಮತಗಳನ್ನು ಪಡೆಯುವಾಗ ಸಲುವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತಾಂತರವಾಗಲೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶ ಸಚಿವ ಆನಂದಸ್ವರೂಪ್ ಶುಕ್ಲ ಆರೋಪಿಸಿದರು.</p>.<p>ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಖಿಲೇಶ್ ಯಾದವ್ಗೆ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐ ಬೆಂಬಲ ಇದೆ. ಐಎಸ್ಐನಿಂದ ಆರ್ಥಿಕ ನೆರವನ್ನೂ ಪಡೆಯುತ್ತಿರಬಹುದು’ ಎಂದು ಆರೋಪಿಸಿದರು.</p>.<p>‘ಇಸ್ಲಾಮಿಕ್ ಜಗತ್ತಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸವಾಲಾಗಿ ಪರಿಣಮಿಸಿದ್ದಾರೆ. ಹೀಗಾಗಿ ಅಖಿಲೇಶ್ ಯಾದವ್ ಮುಸ್ಲಿಮರ ಬೆಂಬಲ ಪಡೆಯುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಹರ್ದೋಯಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಖಿಲೇಶ್, ಮಹಾತ್ಮಗಾಂಧಿ, ಸರ್ದಾರ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರು ಅವರಂತೆ ಮುಹಮ್ಮದ್ ಅಲಿ ಜಿನ್ನಾ ಅವರೂ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು’ ಎಂದು ಹೇಳಿದ್ದರು.</p>.<p>ಅಖಿಲೇಶ್ ಯಾದವ್ ಅವರ ಈ ಹೇಳಿಕೆಗೆ ಭಾರಿ ಟೀಕೆಗಳು ವ್ಯಕ್ತವಾಗಿದ್ದವು. ಈಗ ಸಚಿವ ಶುಕ್ಲ ಅವರಿಂದಲೂ ಟೀಕೆ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>