ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ‍್ರದೇಶ ಚುನಾವಣೆ ಹಿನ್ನೆಲೆ: ಅಖಿಲೇಶ್‌ರನ್ನು ಭೇಟಿಯಾದ ಎಎಪಿ ಮುಖಂಡರು

Last Updated 24 ನವೆಂಬರ್ 2021, 16:34 IST
ಅಕ್ಷರ ಗಾತ್ರ

ಲಖನೌ: ಆಮ್‌ ಆದ್ಮಿ ಪಕ್ಷದಮುಖಂಡರಾದ ಸಂಜಯ್‌ ಸಿಂಗ್‌ ಮತ್ತು ದಿಲೀಪ್‌ ಪಾಂಡೆ ಅವರುಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ರನ್ನು ಇಂದು(ಬುಧವಾರ) ಭೇಟಿ ಮಾಡಿ ಮೈತ್ರಿಯ ಕುರಿತು ಮಾತುಕತೆ ನಡೆಸಿದ್ದಾರೆ.

ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆ ಹಿನ್ನೆಲೆಯಲ್ಲಿ ಎಎಪಿ ಮತ್ತು ಸಮಾಜವಾದಿ ಪಕ್ಷದ ನಡುವಿನ ಮೈತ್ರಿ ವಿಚಾರವು ಮಹತ್ವ ಪಡೆದುಕೊಂಡಿದೆ.

ಎಎಪಿ ಮುಖಂಡರ ಜೊತೆಗಿನ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅಖಿಲೇಶ್‌ ಯಾದವ್‌, ‘ಬದಲಾವಣೆಗಾಗಿ ಭೇಟಿ'ಎಂದು ಬರೆದುಕೊಂಡಿದ್ದಾರೆ.

2022ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿದ್ದ ಅಖಿಲೇಶ್‌ ಯಾದವ್‌, ‘ಉತ್ತರ ಪ್ರದೇಶದಲ್ಲಿ 2022ರಲ್ಲಿ ಕೇವಲ ಚುನಾವಣೆ ನಡೆಯುವುದಿಲ್ಲ. ಬದಲಾಗಿ ನಾಟಕೀಯ ಕ್ರಾಂತಿಯಾಗಲಿದೆ. ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ 350 ಸೀಟುಗಳನ್ನು ಸಮಾಜವಾದಿ ಪಕ್ಷ ಗೆಲ್ಲಲಿದೆ. ಜನರು ಬಿಜೆಪಿಯ ವಿರುದ್ಧ ಇದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT