‘ಜೂನ್ 7, 2017 ರಂದು, `ಹಿಂದಿ ಸ್ವರಾಜ್ ದಿವಸ್’ಕಾರ್ಯಕ್ರಮದಲ್ಲಿ ಭಾಗವಹಿಸಲು ಯೋಗಿ ಲಖನೌ ವಿಶ್ವವಿದ್ಯಾಲಯದ ಕ್ಯಾಂಪಸ್ಗೆ ತೆರಳುತ್ತಿದ್ದಾಗ, ಅಖಿಲ ಭಾರತ ವಿದ್ಯಾರ್ಥಿ ಸಂಘ, ಭಾರತೀಯ ವಿದ್ಯಾರ್ಥಿ ಒಕ್ಕೂಟ ಮತ್ತು ಸಮಾಜವಾದಿ ಛತ್ರ ಸಭಾದ ವಿದ್ಯಾರ್ಥಿಗಳು ಒಟ್ಟಾಗಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದೆವು. ಯೋಗಿ ಅವರ ಬೆಂಗಾವಲು ಪಡೆಯನ್ನು ತಡೆದಿದ್ದೆವು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದೆವು’ಎಂದು ಶುಕ್ಲಾ ಪಿಟಿಐಗೆ ತಿಳಿಸಿದ್ದಾರೆ.