<p><strong>ಲಖನೌ:</strong> ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿರುವ ಕಾರಣ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.</p>.<p>ಅಖಿಲೇಶ್ ಯಾದವ್ ಅವರು ಅಜಮ್ಘಡ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದಾರೆ.</p>.<p>ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು, ಬಿಜೆಪಿಯ ಎಸ್.ಪಿ ಸಿಂಗ್ ಬಘೇಲ್ ಎದುರು 66,782 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕರ್ಹಾಲ್ನಲ್ಲಿ ಸಮಾಜವಾದಿ ಪಕ್ಷವು 1993ರಿಂದ ಸತತವಾಗಿ ಗೆಲ್ಲುತ್ತಾ ಬಂದಿತ್ತು. ಆದರೆ, 2002ರಲ್ಲಿ ಮಾತ್ರ ಇಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು.</p>.<p><a href="https://www.prajavani.net/india-news/uttar-pradesh-among-3-poorest-states-as-per-niti-aayog-mpi-ranking-sp-chief-akhilesh-yadav-jibe-at-921324.html" itemprop="url">ನೀತಿ ಆಯೋಗದ ಎಂಪಿಐ ರ್ಯಾಂಕಿಂಗ್ನಲ್ಲಿ ಉತ್ತರಪ್ರದೇಶಕ್ಕೆ ಕಳಪೆ ಸ್ಥಾನ: ಅಖಿಲೇಶ್ </a></p>.<p>ಅಜಮ್ಘಡದ ಸಂಸದರಾಗಿರುವ ಅಖಿಲೇಶ್ ಯಾದವ್ 2012, 2017ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. 2012ರಲ್ಲಿ ಮುಖ್ಯಮಂತ್ರಿಯಾಗಬೇಕಾದ ಸಂದರ್ಭ ಒದಗಿ ಬಂದಾಗ ಕನೌಜ್ನ ಸಂಸದರಾಗಿದ್ದ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಪರಿಷತ್ ಪ್ರವೇಶಿಸಿದ್ದರು.</p>.<p>2022ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿ ಹೇಳಿದ್ದ ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ಅವರು ಚುನಾವಣೆ ಕಣಕ್ಕೆ ಧುಮುಕುತ್ತಲೇ ತಾವೂ ಕೂಡ ಸ್ಪರ್ಧೆ ಮಾಡುವ ತೀರ್ಮಾನ ಕೈಗೊಂಡಿದ್ದರು.</p>.<p><a href="https://www.prajavani.net/india-news/akhilesh-yadav-slams-bjp-over-lpg-petrol-diesel-price-hike-gift-of-inflation-921629.html" itemprop="url">ಎಲ್ಪಿಜಿ ದರ ಏರಿಕೆ: ಜನರಿಗೆ 'ಹಣದುಬ್ಬರದ ಮತ್ತೊಂದು ಗಿಫ್ಟ್'–ಅಖಿಲೇಶ್ ಟೀಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿರುವ ಕಾರಣ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.</p>.<p>ಅಖಿಲೇಶ್ ಯಾದವ್ ಅವರು ಅಜಮ್ಘಡ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದಾರೆ.</p>.<p>ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು, ಬಿಜೆಪಿಯ ಎಸ್.ಪಿ ಸಿಂಗ್ ಬಘೇಲ್ ಎದುರು 66,782 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕರ್ಹಾಲ್ನಲ್ಲಿ ಸಮಾಜವಾದಿ ಪಕ್ಷವು 1993ರಿಂದ ಸತತವಾಗಿ ಗೆಲ್ಲುತ್ತಾ ಬಂದಿತ್ತು. ಆದರೆ, 2002ರಲ್ಲಿ ಮಾತ್ರ ಇಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು.</p>.<p><a href="https://www.prajavani.net/india-news/uttar-pradesh-among-3-poorest-states-as-per-niti-aayog-mpi-ranking-sp-chief-akhilesh-yadav-jibe-at-921324.html" itemprop="url">ನೀತಿ ಆಯೋಗದ ಎಂಪಿಐ ರ್ಯಾಂಕಿಂಗ್ನಲ್ಲಿ ಉತ್ತರಪ್ರದೇಶಕ್ಕೆ ಕಳಪೆ ಸ್ಥಾನ: ಅಖಿಲೇಶ್ </a></p>.<p>ಅಜಮ್ಘಡದ ಸಂಸದರಾಗಿರುವ ಅಖಿಲೇಶ್ ಯಾದವ್ 2012, 2017ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. 2012ರಲ್ಲಿ ಮುಖ್ಯಮಂತ್ರಿಯಾಗಬೇಕಾದ ಸಂದರ್ಭ ಒದಗಿ ಬಂದಾಗ ಕನೌಜ್ನ ಸಂಸದರಾಗಿದ್ದ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಪರಿಷತ್ ಪ್ರವೇಶಿಸಿದ್ದರು.</p>.<p>2022ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿ ಹೇಳಿದ್ದ ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ಅವರು ಚುನಾವಣೆ ಕಣಕ್ಕೆ ಧುಮುಕುತ್ತಲೇ ತಾವೂ ಕೂಡ ಸ್ಪರ್ಧೆ ಮಾಡುವ ತೀರ್ಮಾನ ಕೈಗೊಂಡಿದ್ದರು.</p>.<p><a href="https://www.prajavani.net/india-news/akhilesh-yadav-slams-bjp-over-lpg-petrol-diesel-price-hike-gift-of-inflation-921629.html" itemprop="url">ಎಲ್ಪಿಜಿ ದರ ಏರಿಕೆ: ಜನರಿಗೆ 'ಹಣದುಬ್ಬರದ ಮತ್ತೊಂದು ಗಿಫ್ಟ್'–ಅಖಿಲೇಶ್ ಟೀಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>