ಕೇಂದ್ರದ ವಿರುದ್ಧ ಆಕ್ರೋಶ: ಪೆಗಾಸಸ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಎನ್ಡಿಎಗೆ ಲೋಕಸಭೆಯಲ್ಲಿ 350ರಷ್ಟು ಸ್ಥಾನಗಳಿವೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ. ಆದರೂ ಅವರು ಗೂಢಚರ್ಯೆ ಯಾಕೆ ನಡೆಸುತ್ತಿದ್ದಾರೆ ಮತ್ತು ಆ ಮೂಲಕ ಏನನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ? ಈ ರೀತಿ ಮಾಡುವ ಮೂಲಕ ಅವರು ವಿದೇಶಿ ಶಕ್ತಿಗಳಿಗೆ ನೆರವಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.