<p><strong>ದೇವರಿಯಾ (ಉತ್ತರ ಪ್ರದೇಶ):</strong> ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಯೋತ್ಪಾದಕರನ್ನು ರಕ್ಷಿಸುವುದಕ್ಕಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆಯೇ ವಿನಃ ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದ್ದಾರೆ.</p>.<p>ಉತ್ತರ ಪ್ರದೇಶದ ದೇವರಿಯಾದ ರುದ್ರಾಪುರದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಅಖಿಲೇಶ್ ಯಾದವ್ ಅಧಿಕಾರದಲ್ಲಿದ್ದಾಗ ಬಯಸಿದ್ದರು ಎಂದು ಆರೋಪಿಸಿದ್ದಾರೆ.</p>.<p><a href="https://www.prajavani.net/india-news/jp-nadda-on-ks-eshwarappas-saffron-flag-comment-says-bjp-doesnt-tolerate-irresponsible-statements-913259.html" itemprop="url">ಬೇಜವಾಬ್ದಾರಿ ಹೇಳಿಕೆಗಳನ್ನು ಸಹಿಸಲ್ಲ: ಈಶ್ವರಪ್ಪ ಹೇಳಿಕೆಗೆ ನಡ್ಡಾ ಪ್ರತಿಕ್ರಿಯೆ </a></p>.<p>‘ಉಳಿದವರೆಲ್ಲ ಸಂವಿಧಾನವನ್ನು ರಕ್ಷಿಸಲು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ಅಖಿಲೇಶ್ ಅವರು ಭಯೋತ್ಪಾದಕರನ್ನು ರಕ್ಷಿಸಲು ಪ್ರತಿಜ್ಞಾವಿಧಿ ಸ್ವೀಕರಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.</p>.<p>‘ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ 38 ಮಂದಿ ಅಪರಾಧಿಗಳಿಗೆ ಶುಕ್ರವಾರ ಮರಣದಂಡನೆ ವಿಧಿಸಲಾಗಿತ್ತು. ಆ ಪೈಕಿ ಒಬ್ಬನಾದ ಮೊಹಮ್ಮದ್ ಸೈಫ್ನ ತಂದೆ ಶದಾಬ್ ಅಹ್ಮದ್ ಸಮಾಜವಾದಿ ಪಕ್ಷದ ಕಾರ್ಯಕರ್ತ. ಅಖಿಲೇಶ್ ಜತೆ ಆಪ್ತರು’ ಎಂದು ನಡ್ಡಾ ಹೇಳಿದ್ದಾರೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧವೂ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.</p>.<p><a href="https://www.prajavani.net/india-news/hindus-who-dont-vote-for-me-have-muslim-blood-says-bjp-mla-913251.html" itemprop="url">ನನಗೆ ಮತ ಹಾಕದ ಹಿಂದುಗಳಲ್ಲಿ ಮುಸ್ಲಿಂ ರಕ್ತ ಹರಿಯುತ್ತಿರುತ್ತದೆ: ಬಿಜೆಪಿ ಶಾಸಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಿಯಾ (ಉತ್ತರ ಪ್ರದೇಶ):</strong> ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಯೋತ್ಪಾದಕರನ್ನು ರಕ್ಷಿಸುವುದಕ್ಕಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆಯೇ ವಿನಃ ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದ್ದಾರೆ.</p>.<p>ಉತ್ತರ ಪ್ರದೇಶದ ದೇವರಿಯಾದ ರುದ್ರಾಪುರದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಅಖಿಲೇಶ್ ಯಾದವ್ ಅಧಿಕಾರದಲ್ಲಿದ್ದಾಗ ಬಯಸಿದ್ದರು ಎಂದು ಆರೋಪಿಸಿದ್ದಾರೆ.</p>.<p><a href="https://www.prajavani.net/india-news/jp-nadda-on-ks-eshwarappas-saffron-flag-comment-says-bjp-doesnt-tolerate-irresponsible-statements-913259.html" itemprop="url">ಬೇಜವಾಬ್ದಾರಿ ಹೇಳಿಕೆಗಳನ್ನು ಸಹಿಸಲ್ಲ: ಈಶ್ವರಪ್ಪ ಹೇಳಿಕೆಗೆ ನಡ್ಡಾ ಪ್ರತಿಕ್ರಿಯೆ </a></p>.<p>‘ಉಳಿದವರೆಲ್ಲ ಸಂವಿಧಾನವನ್ನು ರಕ್ಷಿಸಲು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ಅಖಿಲೇಶ್ ಅವರು ಭಯೋತ್ಪಾದಕರನ್ನು ರಕ್ಷಿಸಲು ಪ್ರತಿಜ್ಞಾವಿಧಿ ಸ್ವೀಕರಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.</p>.<p>‘ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ 38 ಮಂದಿ ಅಪರಾಧಿಗಳಿಗೆ ಶುಕ್ರವಾರ ಮರಣದಂಡನೆ ವಿಧಿಸಲಾಗಿತ್ತು. ಆ ಪೈಕಿ ಒಬ್ಬನಾದ ಮೊಹಮ್ಮದ್ ಸೈಫ್ನ ತಂದೆ ಶದಾಬ್ ಅಹ್ಮದ್ ಸಮಾಜವಾದಿ ಪಕ್ಷದ ಕಾರ್ಯಕರ್ತ. ಅಖಿಲೇಶ್ ಜತೆ ಆಪ್ತರು’ ಎಂದು ನಡ್ಡಾ ಹೇಳಿದ್ದಾರೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧವೂ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.</p>.<p><a href="https://www.prajavani.net/india-news/hindus-who-dont-vote-for-me-have-muslim-blood-says-bjp-mla-913251.html" itemprop="url">ನನಗೆ ಮತ ಹಾಕದ ಹಿಂದುಗಳಲ್ಲಿ ಮುಸ್ಲಿಂ ರಕ್ತ ಹರಿಯುತ್ತಿರುತ್ತದೆ: ಬಿಜೆಪಿ ಶಾಸಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>