ಈ ಬಗ್ಗೆ ಶನಿವಾರ ಮಾತನಾಡಿರುವ ಅವರು, 'ಬಿಜೆಪಿಯನ್ನು ಹೊರತುಪಡಿಸಿ ಬೇರೆ ಯಾವ ಪಕ್ಷವೂ ರೈತರ ಜೊತೆ ಈ ರೀತಿಯಾಗಿ ನಡೆದುಕೊಂಡಿಲ್ಲ. ಸಾಲ ಮನ್ನಾ ಮಾಡುವುದು ಮಾತ್ರವಲ್ಲದೆ ರೈತರ ಆದಾಯವನ್ನು ದ್ವಿಗುಣಗೊಳಿಸುವಂತಹ ನೀತಿಗಳನ್ನು ತರುತ್ತೇವೆ ಎಂಬುದಾಗಿ ಈ ಹಿಂದೆ ಬಿಜೆಪಿಯವರೇ ಹೇಳಿದ್ದರು. ಇಂದು ಅವರೇ ರೈತರ ಜೊತೆ ಈ ರೀತಿಯಾಗಿ ವರ್ತಿಸುತ್ತಿದ್ದಾರೆ' ಎಂದು ಹರಿಹಾಯ್ದಿದ್ದಾರೆ.