<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ಉಗ್ರ ಸಂಘಟನೆ ಅಲ್ ಖೈದಾ ಬೆಳೆಯುತ್ತಿದ್ದು, ಅಕ್ರಮ ಬಾಂಬ್ ತಯಾರಿಕೆ ಅತಿರೇಕವಾಗಿದೆ ಎಂದು ರಾಜ್ಯಪಾಲ ಜಗದೀಪ್ ಧನ್ಕರ್ ಗಂಭೀರ ಆರೋಪ ಮಾಡಿದ್ದಾರೆ.</p>.<p>ಈ ವಿಚಾರವಾಗಿ ಶನಿವಾರ ಮಾತನಾಡಿರುವ ಅವರು, 'ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಅಪಾಯದಲ್ಲಿದೆ. ಇಲ್ಲಿ ಉಗ್ರ ಸಂಘಟನೆಯಾದ ಅಲ್ ಖೈದಾ ಬೆಳೆಯುತ್ತಿದೆ. ಅಕ್ರಮ ಬಾಂಬ್ ತಯಾರಿಕೆ ಅತಿರೇಕವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಏನು ಮಾಡುತ್ತಿದೆ ಎಂದು ತಿಳಿಯಲು ಬಯಸುತ್ತೇನೆ' ಎಂದು ಹೇಳಿದ್ದಾರೆ.</p>.<p>'ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ರಾಜಕೀಯ ನಾಯಕರ ಹತ್ಯೆ ಮಾಡಲಾಗುತ್ತಿದೆ. ಆದರೂ ಗೃಹ ಕಾರ್ಯದರ್ಶಿ ಅಥವಾ ಡಿಜಿಪಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ’ ಎಂದು ರಾಜ್ಯಪಾಲರು ಈ ಹಿಂದೆ ಟ್ವೀಟ್ ಮಾಡಿದ್ದರು.</p>.<p>ಕಳೆದ ಕೆಲ ತಿಂಗಳಿಂದ ಪಶ್ಚಿಮ ಬಂಗಾಳ ರಾಜ್ಯಪಾಲರು ಅಲ್ಲಿನ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನವನ್ನು ಹೊರಹಾಕುತ್ತಲೇ ಇದ್ದಾರೆ.</p>.<p>ಮುಂದಿನ ಕೆಲ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವಿನ ರಾಜಕೀಯ ಸಂಘರ್ಷಗಳು ತಾರಕಕ್ಕೇರಿದ್ದು, ರಾಜ್ಯಪಾಲರ ಆರೋಪಗಳು ಮಹತ್ವ ಪಡೆದುಕೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ಉಗ್ರ ಸಂಘಟನೆ ಅಲ್ ಖೈದಾ ಬೆಳೆಯುತ್ತಿದ್ದು, ಅಕ್ರಮ ಬಾಂಬ್ ತಯಾರಿಕೆ ಅತಿರೇಕವಾಗಿದೆ ಎಂದು ರಾಜ್ಯಪಾಲ ಜಗದೀಪ್ ಧನ್ಕರ್ ಗಂಭೀರ ಆರೋಪ ಮಾಡಿದ್ದಾರೆ.</p>.<p>ಈ ವಿಚಾರವಾಗಿ ಶನಿವಾರ ಮಾತನಾಡಿರುವ ಅವರು, 'ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಅಪಾಯದಲ್ಲಿದೆ. ಇಲ್ಲಿ ಉಗ್ರ ಸಂಘಟನೆಯಾದ ಅಲ್ ಖೈದಾ ಬೆಳೆಯುತ್ತಿದೆ. ಅಕ್ರಮ ಬಾಂಬ್ ತಯಾರಿಕೆ ಅತಿರೇಕವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಏನು ಮಾಡುತ್ತಿದೆ ಎಂದು ತಿಳಿಯಲು ಬಯಸುತ್ತೇನೆ' ಎಂದು ಹೇಳಿದ್ದಾರೆ.</p>.<p>'ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ರಾಜಕೀಯ ನಾಯಕರ ಹತ್ಯೆ ಮಾಡಲಾಗುತ್ತಿದೆ. ಆದರೂ ಗೃಹ ಕಾರ್ಯದರ್ಶಿ ಅಥವಾ ಡಿಜಿಪಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ’ ಎಂದು ರಾಜ್ಯಪಾಲರು ಈ ಹಿಂದೆ ಟ್ವೀಟ್ ಮಾಡಿದ್ದರು.</p>.<p>ಕಳೆದ ಕೆಲ ತಿಂಗಳಿಂದ ಪಶ್ಚಿಮ ಬಂಗಾಳ ರಾಜ್ಯಪಾಲರು ಅಲ್ಲಿನ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನವನ್ನು ಹೊರಹಾಕುತ್ತಲೇ ಇದ್ದಾರೆ.</p>.<p>ಮುಂದಿನ ಕೆಲ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವಿನ ರಾಜಕೀಯ ಸಂಘರ್ಷಗಳು ತಾರಕಕ್ಕೇರಿದ್ದು, ರಾಜ್ಯಪಾಲರ ಆರೋಪಗಳು ಮಹತ್ವ ಪಡೆದುಕೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>