<p><strong>ಚೆನ್ನೈ: </strong>ಡಿಎಂಕೆ ಸಂಸ್ಥಾಪಕ, ದಿವಂಗತ ಎಂ.ಕರುಣಾನಿಧಿಯವರ ಪುತ್ರ ಎಂ.ಕೆ.ಅಳಗಿರಿ ಅವರು ಜನವರಿ 3 ರಂದು ಮದುರೈಯಲ್ಲಿ ಬೆಂಬಲಿಗರ ಸಭೆ ನಡೆಸಲು ನಿರ್ಧರಿಸಿದ್ದಾರೆ.</p>.<p>ಗೋಪಾಲಪುರಂನಲ್ಲಿರುವ ನಿವಾಸದಲ್ಲಿ ತಮ್ಮ ತಾಯಿ ದಯಾಳು ಅಮ್ಮಾಲ್ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಜನವರಿ 3ರಂದು ಬೆಂಬಲಿಗರ ಸಭೆ ಕರೆದಿದ್ದೇನೆ. ಅವರೊಂದಿಗೆ ಚರ್ಚಿಸಿ ನನ್ನ ರಾಜಕೀಯ ನಡೆಯನ್ನು ನಿರ್ಧರಿಸಲಿದ್ದೇನೆ’ ಎಂದು ಹೇಳಿದ್ದಾರೆ.</p>.<p>ಹೊಸ ರಾಜಕೀಯ ಪಕ್ಷವನ್ನು ಆರಂಭಿಸುತ್ತೀರಾ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಬೆಂಬಲಿಗರು ಏನು ಹೇಳುತ್ತಾರೆ ಅದಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದರು.</p>.<p>ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪರ ಕೆಲಸ ಮಾಡುವ ಯೋಚನೆ ಏನಾದರೂ ಇದೆಯೇ ಎಂಬ ಪ್ರಶ್ನೆಗೆ ನಕಾರಾತ್ಮಾಕ ಪ್ರತಿಕ್ರಿಯೆ ನೀಡಿದರು.</p>.<p>‘ನಟ ರಜನಿಕಾಂತ್ ಜನ್ಮದಿನದಂದು ಅವರನ್ನು ಭೇಟಿಯಾಗಲು ಆಗಿರಲಿಲ್ಲ. ಹೀಗಾಗಿ ಶೀಘ್ರವೇ ಅವರನ್ನು ಭೇಟಿಯಾಗಬೇಕೆಂದುಕೊಂಡಿದ್ದೇನೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಈ ಹಿಂದೆ ಕೇಂದ್ರ ಸಚಿವರಾಗಿದ್ದ ಅಳಗಿರಿಯವರನ್ನು 2014ರಲ್ಲಿ ಅವರ ತಂದೆಯೇ ಪಕ್ಷದಿಂದ ಉಚ್ಛಾಟಿಸಿದ್ದರು. ಕರುಣಾನಿಧಿಯವರು ಎಂ.ಕೆ.ಸ್ಟಾಲಿನ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಪಕ್ಷದಲ್ಲಿ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ಕಲ್ಪಿಸಿದ್ದರಿಂದ ಸಹೋದರರ ನಡುವೆ ವೈರತ್ವ ಬೆಳೆದಿತ್ತು.</p>.<p>ಈ ಬಾರಿಯ ಚುನಾವಣೆಯಲ್ಲಿ ಸಹೋದರನನ್ನು ಹಣಿಯಲು ನಿರ್ಧರಿಸಿರುವ ಅಳಗಿರಿ, ಸ್ವಂತ ಪಕ್ಷ ಸ್ಥಾಪಿಸಿ ಅದನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಾರೆ ಎಂಬ ಮಾತುಗಳೂ ಕೇಳಿಬಂದಿದ್ದವು. ಇದನ್ನು ಅವರು ಅಲ್ಲಗಳೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಡಿಎಂಕೆ ಸಂಸ್ಥಾಪಕ, ದಿವಂಗತ ಎಂ.ಕರುಣಾನಿಧಿಯವರ ಪುತ್ರ ಎಂ.ಕೆ.ಅಳಗಿರಿ ಅವರು ಜನವರಿ 3 ರಂದು ಮದುರೈಯಲ್ಲಿ ಬೆಂಬಲಿಗರ ಸಭೆ ನಡೆಸಲು ನಿರ್ಧರಿಸಿದ್ದಾರೆ.</p>.<p>ಗೋಪಾಲಪುರಂನಲ್ಲಿರುವ ನಿವಾಸದಲ್ಲಿ ತಮ್ಮ ತಾಯಿ ದಯಾಳು ಅಮ್ಮಾಲ್ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಜನವರಿ 3ರಂದು ಬೆಂಬಲಿಗರ ಸಭೆ ಕರೆದಿದ್ದೇನೆ. ಅವರೊಂದಿಗೆ ಚರ್ಚಿಸಿ ನನ್ನ ರಾಜಕೀಯ ನಡೆಯನ್ನು ನಿರ್ಧರಿಸಲಿದ್ದೇನೆ’ ಎಂದು ಹೇಳಿದ್ದಾರೆ.</p>.<p>ಹೊಸ ರಾಜಕೀಯ ಪಕ್ಷವನ್ನು ಆರಂಭಿಸುತ್ತೀರಾ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಬೆಂಬಲಿಗರು ಏನು ಹೇಳುತ್ತಾರೆ ಅದಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದರು.</p>.<p>ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪರ ಕೆಲಸ ಮಾಡುವ ಯೋಚನೆ ಏನಾದರೂ ಇದೆಯೇ ಎಂಬ ಪ್ರಶ್ನೆಗೆ ನಕಾರಾತ್ಮಾಕ ಪ್ರತಿಕ್ರಿಯೆ ನೀಡಿದರು.</p>.<p>‘ನಟ ರಜನಿಕಾಂತ್ ಜನ್ಮದಿನದಂದು ಅವರನ್ನು ಭೇಟಿಯಾಗಲು ಆಗಿರಲಿಲ್ಲ. ಹೀಗಾಗಿ ಶೀಘ್ರವೇ ಅವರನ್ನು ಭೇಟಿಯಾಗಬೇಕೆಂದುಕೊಂಡಿದ್ದೇನೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಈ ಹಿಂದೆ ಕೇಂದ್ರ ಸಚಿವರಾಗಿದ್ದ ಅಳಗಿರಿಯವರನ್ನು 2014ರಲ್ಲಿ ಅವರ ತಂದೆಯೇ ಪಕ್ಷದಿಂದ ಉಚ್ಛಾಟಿಸಿದ್ದರು. ಕರುಣಾನಿಧಿಯವರು ಎಂ.ಕೆ.ಸ್ಟಾಲಿನ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಪಕ್ಷದಲ್ಲಿ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ಕಲ್ಪಿಸಿದ್ದರಿಂದ ಸಹೋದರರ ನಡುವೆ ವೈರತ್ವ ಬೆಳೆದಿತ್ತು.</p>.<p>ಈ ಬಾರಿಯ ಚುನಾವಣೆಯಲ್ಲಿ ಸಹೋದರನನ್ನು ಹಣಿಯಲು ನಿರ್ಧರಿಸಿರುವ ಅಳಗಿರಿ, ಸ್ವಂತ ಪಕ್ಷ ಸ್ಥಾಪಿಸಿ ಅದನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಾರೆ ಎಂಬ ಮಾತುಗಳೂ ಕೇಳಿಬಂದಿದ್ದವು. ಇದನ್ನು ಅವರು ಅಲ್ಲಗಳೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>