ಕುಡಿದ ಮತ್ತಿನಲ್ಲಿ ಮನೆಗೆ ಬಂದ ಆರೋಪಿ ರಮಣಾಚಾರಿ, ಮದ್ಯ ಖರೀದಿಸಲು ಹಣ ನೀಡುವಂತೆ ಪತ್ನಿ ಬಳಿ ಒತ್ತಾಯಿಸಿದ್ದಾನೆ. ಆದರೆ, ಹಣ ನೀಡಲು ನಿರಾಕರಿಸಿದ ಪತ್ನಿಯೊಂದಿಗೆ ಆರೋಪಿ ಜಗಳವಾಡಿದ್ದಾನೆ. ತೀವ್ರ ವಾಗ್ವಾದದ ಸಂದರ್ಭದಲ್ಲಿ ಕೊಡಲಿಯಿಂದ ರಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಚಂದನಾ ತಾಯಿಯನ್ನು ರಕ್ಷಿಸಲು ಬಂದಾಗ ಆಕೆಯ ಮೇಲೂ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ನೆರೆಹೊರೆಯವರು ಧಾವಿಸಿ ಒಂಬತ್ತು ವರ್ಷದ ಬಾಲಕನನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.