ಭಾರೀ ಮಳೆಯ ಹಿನ್ನೆಲೆಯಲ್ಲಿ ಮರವೊಂದು ಬಿದ್ದು ಯುವಕ ಮೃತಪಟ್ಟಿದ್ದಾನೆ ಎಂದು ಎಲ್ಲರೂ ಭಾವಿಸಿದ್ದರು. ಆ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿರುವ ಪೊಲೀಸ್ ಇನ್ಸ್ಪೆಕ್ಟರ್ ಟಿ.ರಾಜೇಶ್ವರಿ ಅವರು ವ್ಯಕ್ತಿಯು ಇನ್ನೂ ಉಸಿರಾಡುತ್ತಿರುವುದನ್ನು ಗಮನಿಸಿದ್ದಾರೆ. ವ್ಯಕ್ತಿಯನ್ನು ತಾವೇ ಹೆಗಲ ಮೇಲೆ ಹೊತ್ತುಕೊಂಡು ಆಟೋರಿಕ್ಷಾವೊಂದಕ್ಕೆ ಹಾಕಿದ್ದಾರೆ. ಹತ್ತಿರದ ಆಸ್ಪತ್ರೆಗೆ ಸಾಗಿಸುವ ಮೂಲಕ ಆತನ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.