<p><strong>ಗುವಾಹಟಿ:</strong> ಬೆಂಗಳೂರು ಮತ್ತು ಮುಂಬೈಯಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಆರ್ಟಿ–ಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಅಸ್ಸಾಂ ಸರ್ಕಾರ ಭಾನುವಾರ ಹೇಳಿದೆ.</p>.<p>ಬೆಂಗಳೂರು ಮತ್ತು ಮುಂಬೈಯಿಂದ ರಾಜ್ಯದ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಯಾಣಿಕರು 72 ಗಂಟೆ ಮುಂಚಿತವಾಗಿ ಆರ್ಟಿ–ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿರಬೇಕು. ಏಪ್ರಿಲ್ 9ರಿಂದ ನಿಯಮ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.</p>.<p>ಅಲ್ಲದೆ, ರಾಜ್ಯದಲ್ಲಿ ಆರ್ಟಿ–ಪಿಸಿಆರ್ ಕೋವಿಡ್ ಪರೀಕ್ಷೆಗೆ ಗರಿಷ್ಠ ₹500 ದರ ವಿಧಿಸಿ ಆದೇಶ ಹೊರಡಿಸಿದೆ. ಮನೆಯಿಂದಲೇ ಆರ್ಟಿ–ಪಿಸಿಆರ್ ಮಾದರಿ ಸಂಗ್ರಹಿಸಲು ₹700 ದರ ನಿಗದಿಪಡಿಸಿದೆ. ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ₹250ರ ದರ ನಿಗದಿಪಡಿಸಲಾಗಿದೆ.</p>.<p><strong>ಓದಿ:</strong><a href="https://www.prajavani.net/karnataka-news/covid-coronavirus-pandemic-karnataka-update-new-cases-bangalore-govt-819031.html" itemprop="url">Covid-19 Karnataka Update: ಇಂದು 4,373 ಹೊಸ ಪ್ರಕರಣ, 19 ಮಂದಿ ಸಾವು</a></p>.<p><strong>ಓದಿ:</strong><a href="https://www.prajavani.net/india-news/maharashtra-reports-biggest-ever-spike-new-covid-19-cases-in-mumbai-sees-record-spike-819060.html" itemprop="url">ಮಹಾರಾಷ್ಟ್ರದಲ್ಲಿ ಒಂದೇ ದಿನ 49,447 ಮಂದಿಗೆ ಕೋವಿಡ್ ಸೋಂಕು</a></p>.<p>ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 4,373 ಹೊಸ ಪ್ರಕರಣ ದೃಢಪಟ್ಟಿದ್ದು ಇದರಲ್ಲಿ 3,002 ಬೆಂಗಳೂರಿನಲ್ಲೇ ವರದಿಯಾಗಿತ್ತು. ಮಹಾರಾಷ್ಟ್ರದಲ್ಲಿ ಶನಿವಾರ 49,447 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಬೆಂಗಳೂರು ಮತ್ತು ಮುಂಬೈಯಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಆರ್ಟಿ–ಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಅಸ್ಸಾಂ ಸರ್ಕಾರ ಭಾನುವಾರ ಹೇಳಿದೆ.</p>.<p>ಬೆಂಗಳೂರು ಮತ್ತು ಮುಂಬೈಯಿಂದ ರಾಜ್ಯದ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಯಾಣಿಕರು 72 ಗಂಟೆ ಮುಂಚಿತವಾಗಿ ಆರ್ಟಿ–ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿರಬೇಕು. ಏಪ್ರಿಲ್ 9ರಿಂದ ನಿಯಮ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.</p>.<p>ಅಲ್ಲದೆ, ರಾಜ್ಯದಲ್ಲಿ ಆರ್ಟಿ–ಪಿಸಿಆರ್ ಕೋವಿಡ್ ಪರೀಕ್ಷೆಗೆ ಗರಿಷ್ಠ ₹500 ದರ ವಿಧಿಸಿ ಆದೇಶ ಹೊರಡಿಸಿದೆ. ಮನೆಯಿಂದಲೇ ಆರ್ಟಿ–ಪಿಸಿಆರ್ ಮಾದರಿ ಸಂಗ್ರಹಿಸಲು ₹700 ದರ ನಿಗದಿಪಡಿಸಿದೆ. ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ₹250ರ ದರ ನಿಗದಿಪಡಿಸಲಾಗಿದೆ.</p>.<p><strong>ಓದಿ:</strong><a href="https://www.prajavani.net/karnataka-news/covid-coronavirus-pandemic-karnataka-update-new-cases-bangalore-govt-819031.html" itemprop="url">Covid-19 Karnataka Update: ಇಂದು 4,373 ಹೊಸ ಪ್ರಕರಣ, 19 ಮಂದಿ ಸಾವು</a></p>.<p><strong>ಓದಿ:</strong><a href="https://www.prajavani.net/india-news/maharashtra-reports-biggest-ever-spike-new-covid-19-cases-in-mumbai-sees-record-spike-819060.html" itemprop="url">ಮಹಾರಾಷ್ಟ್ರದಲ್ಲಿ ಒಂದೇ ದಿನ 49,447 ಮಂದಿಗೆ ಕೋವಿಡ್ ಸೋಂಕು</a></p>.<p>ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 4,373 ಹೊಸ ಪ್ರಕರಣ ದೃಢಪಟ್ಟಿದ್ದು ಇದರಲ್ಲಿ 3,002 ಬೆಂಗಳೂರಿನಲ್ಲೇ ವರದಿಯಾಗಿತ್ತು. ಮಹಾರಾಷ್ಟ್ರದಲ್ಲಿ ಶನಿವಾರ 49,447 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>