<p><strong>ಮುಂಬೈ</strong>: ಮುಂಬರುವ ಚುನಾವಣೆಗಳಲ್ಲಿ ಪಕ್ಷವು ಏಕಾಂಗಿಯಾಗಿಯೇ ಸ್ಪರ್ಧಿಸಲಿದೆ ಎಂಬುದಾಗಿ ಕಾಂಗ್ರೆಸ್ ಮುಖಂಡರು ಹೇಳಿದ ನಂತರ ಆಡಳಿತಾರೂಢ ಮೈತ್ರಿಕೂಟ ‘ಮಹಾ ವಿಕಾಸ್ ಆಘಾಡಿ’ಯ (ಎಂವಿಎ) ಅಂಗ ಪಕ್ಷಗಳ ನಡುವೆ ಆರಂಭವಾಗಿರುವ ವಾಕ್ಸಮರ ಈಗ ತಾರಕಕ್ಕೇರಿದೆ.</p>.<p>ಶಿವಸೇನಾ, ಎನ್ಸಿಪಿ ಹಾಗೂ ಕಾಂಗ್ರೆಸ್ ಈ ಮೈತ್ರಿಕೂಟದ ಅಂಗಪಕ್ಷಗಳಾಗಿವೆ. ದಿನಗಳು ಉರುಳಿದಂತೆ, ಮೂರೂ ಪಕ್ಷಗಳ ಮುಖಂಡರ ನಡುವಿನ ವಾಕ್ಸಮರ ಉಲ್ಬಣಗೊಳ್ಳುತ್ತಿದ್ದು, ಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.</p>.<p>ಮುಂದಿನ ವರ್ಷ ಬೃಹನ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಬಹುತೇಕ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆಯಲಿವೆ. ಇದನ್ನು, ವಿಧಾನಸಭೆಗೆ ನಡೆಯುವ ಮಿನಿ ಚುನಾವಣೆ ಎಂದೇ ಹೇಳಲಾಗುತ್ತದೆ.</p>.<p>ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಪಕ್ಷವು ಏಕಾಂಗಿಯಾಗಿಯೇ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ನ ಮಹಾರಾಷ್ಟ್ರ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ, ಮುಂಬೈ ಮಹಾನಗರ ಘಟಕದ ಅಧ್ಯಕ್ಷ ಭಾಯ್ ಜಗತಾಪ್ ಅವರು ಇತ್ತೀಚೆಗೆ ಹೇಳಿದ್ದರು.</p>.<p>ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ‘ಏಕಾಂಗಿಯಾಗಿಯೇ ಸ್ಪರ್ಧಿಸಲು ಕಾಂಗ್ರೆಸ್ ಬಯಸಿದರೆ ನಾವೇನೂ ಮಾಡಲು ಆಗದು. ಚುನಾವಣೆಯಲ್ಲಿ ಆ ಪಕ್ಷವನ್ನು ಎದುರಿಸುವುದೊಂದೇ ನಮ್ಮ ಮುಂದಿರುವ ಆಯ್ಕೆ’ ಎಂದು ಹೇಳಿದ್ದರು.</p>.<p>ರಾಹುಲ್ ಗಾಂಧಿಯವರ ಜನ್ಮದಿನದ ನಿಮಿತ್ತ ಕಾಂಗ್ರೆಸ್ ವತಿಯಿಂದ ಶನಿವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟೋಲೆ, ಜಗತಾಪ್ ಸೇರಿದಂತೆ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್ಲ ಮುಖಂಡರು, ಮುಂದಿನ ಚುನಾವಣೆಗಳಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ಪ್ರತಿಪಾದಿಸಿದರು.</p>.<p>ಮಾಜಿ ಮುಖ್ಯಮಂತ್ರಿಗಳಾದ ಸುಶೀಲಕುಮಾರ್ ಶಿಂಧೆ, ಪೃಥ್ವಿರಾಜ್ ಚವ್ಹಾಣ್, ಅಶೋಕ್ ಚವ್ಹಾಣ್ ಅವರೂ ಈ ವೇದಿಕೆಯಲ್ಲಿ ಇದ್ದರು. ಅಶೋಕ್ ಚವ್ಹಾಣ್ ಈಗಿನ ಎಂವಿಎ ಸರ್ಕಾರದಲ್ಲಿ ಮಂತ್ರಿಯೂ ಆಗಿದ್ದಾರೆ.</p>.<p>ಮಹಾರಾಷ್ಟ್ರ ಉಸ್ತುವಾರಿಯಾಗಿರುವ ಎಐಸಿಸಿ ಕಾರ್ಯದರ್ಶಿ ಎಚ್.ಕೆ.ಪಾಟೀಲ ಮಾತನಾಡಿ, ‘ಯಾರೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳಬೇಕು ಎಂಬ ವಿಚಾರವನ್ನು ಹೈಕಮಾಂಡ್ಗೆ ಬಿಡಿ. ಪಕ್ಷವನ್ನು ಬಲಪಡಿಸಲು ಎಲ್ಲರೂ ಶ್ರಮಿಸಿ’ ಎಂದು ಕಿವಿಮಾತು ಹೇಳಿದ್ದರು.</p>.<p>ಅದೇ ದಿನ ಕೆಲವು ಗಂಟೆಗಳ ನಂತರ, ಶಿವಸೇನಾ ಪಕ್ಷದ 55ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಠಾಕ್ರೆ ಅವರು, ಪಟೋಲೆ ಹಾಗೂ ಜಗತಾಪ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸದೇ ಅವರಿಗೆ ತೀಕ್ಷ್ಣವಾದ ತಿರುಗೇಟು ನೀಡಲು ಈ ವೇದಿಕೆಯನ್ನು ಬಳಸಿಕೊಂಡರು.</p>.<p>‘ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಘೋಷಣೆ ಮಾಡುವ ಸಮಯ ಇದಲ್ಲ. ಆದರೆ, ಜನರ ಸಮಸ್ಯೆಗಳನ್ನು ಪರಿಹರಿಸಲು ಗಮನ ನೀಡದೇ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡುವವರಿಗೆ ಜನರು ಚಪ್ಪಲಿಯಿಂದ ಹೊಡೆಯುತ್ತಾರೆ’ ಎಂದು ಚಾಟಿ ಬೀಸಿದ್ದರು.</p>.<p>ಠಾಕ್ರೆ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿದ ಪಟೋಲೆ, ‘ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಎಂವಿಎ ರಚಿಸಲಾಗಿದೆ. ಈ ಹೊಂದಾಣಿಕೆ ಶಾಶ್ವತವೇನೂ ಅಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮುಂಬರುವ ಚುನಾವಣೆಗಳಲ್ಲಿ ಪಕ್ಷವು ಏಕಾಂಗಿಯಾಗಿಯೇ ಸ್ಪರ್ಧಿಸಲಿದೆ ಎಂಬುದಾಗಿ ಕಾಂಗ್ರೆಸ್ ಮುಖಂಡರು ಹೇಳಿದ ನಂತರ ಆಡಳಿತಾರೂಢ ಮೈತ್ರಿಕೂಟ ‘ಮಹಾ ವಿಕಾಸ್ ಆಘಾಡಿ’ಯ (ಎಂವಿಎ) ಅಂಗ ಪಕ್ಷಗಳ ನಡುವೆ ಆರಂಭವಾಗಿರುವ ವಾಕ್ಸಮರ ಈಗ ತಾರಕಕ್ಕೇರಿದೆ.</p>.<p>ಶಿವಸೇನಾ, ಎನ್ಸಿಪಿ ಹಾಗೂ ಕಾಂಗ್ರೆಸ್ ಈ ಮೈತ್ರಿಕೂಟದ ಅಂಗಪಕ್ಷಗಳಾಗಿವೆ. ದಿನಗಳು ಉರುಳಿದಂತೆ, ಮೂರೂ ಪಕ್ಷಗಳ ಮುಖಂಡರ ನಡುವಿನ ವಾಕ್ಸಮರ ಉಲ್ಬಣಗೊಳ್ಳುತ್ತಿದ್ದು, ಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.</p>.<p>ಮುಂದಿನ ವರ್ಷ ಬೃಹನ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಬಹುತೇಕ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆಯಲಿವೆ. ಇದನ್ನು, ವಿಧಾನಸಭೆಗೆ ನಡೆಯುವ ಮಿನಿ ಚುನಾವಣೆ ಎಂದೇ ಹೇಳಲಾಗುತ್ತದೆ.</p>.<p>ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಪಕ್ಷವು ಏಕಾಂಗಿಯಾಗಿಯೇ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ನ ಮಹಾರಾಷ್ಟ್ರ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ, ಮುಂಬೈ ಮಹಾನಗರ ಘಟಕದ ಅಧ್ಯಕ್ಷ ಭಾಯ್ ಜಗತಾಪ್ ಅವರು ಇತ್ತೀಚೆಗೆ ಹೇಳಿದ್ದರು.</p>.<p>ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ‘ಏಕಾಂಗಿಯಾಗಿಯೇ ಸ್ಪರ್ಧಿಸಲು ಕಾಂಗ್ರೆಸ್ ಬಯಸಿದರೆ ನಾವೇನೂ ಮಾಡಲು ಆಗದು. ಚುನಾವಣೆಯಲ್ಲಿ ಆ ಪಕ್ಷವನ್ನು ಎದುರಿಸುವುದೊಂದೇ ನಮ್ಮ ಮುಂದಿರುವ ಆಯ್ಕೆ’ ಎಂದು ಹೇಳಿದ್ದರು.</p>.<p>ರಾಹುಲ್ ಗಾಂಧಿಯವರ ಜನ್ಮದಿನದ ನಿಮಿತ್ತ ಕಾಂಗ್ರೆಸ್ ವತಿಯಿಂದ ಶನಿವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟೋಲೆ, ಜಗತಾಪ್ ಸೇರಿದಂತೆ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್ಲ ಮುಖಂಡರು, ಮುಂದಿನ ಚುನಾವಣೆಗಳಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ಪ್ರತಿಪಾದಿಸಿದರು.</p>.<p>ಮಾಜಿ ಮುಖ್ಯಮಂತ್ರಿಗಳಾದ ಸುಶೀಲಕುಮಾರ್ ಶಿಂಧೆ, ಪೃಥ್ವಿರಾಜ್ ಚವ್ಹಾಣ್, ಅಶೋಕ್ ಚವ್ಹಾಣ್ ಅವರೂ ಈ ವೇದಿಕೆಯಲ್ಲಿ ಇದ್ದರು. ಅಶೋಕ್ ಚವ್ಹಾಣ್ ಈಗಿನ ಎಂವಿಎ ಸರ್ಕಾರದಲ್ಲಿ ಮಂತ್ರಿಯೂ ಆಗಿದ್ದಾರೆ.</p>.<p>ಮಹಾರಾಷ್ಟ್ರ ಉಸ್ತುವಾರಿಯಾಗಿರುವ ಎಐಸಿಸಿ ಕಾರ್ಯದರ್ಶಿ ಎಚ್.ಕೆ.ಪಾಟೀಲ ಮಾತನಾಡಿ, ‘ಯಾರೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳಬೇಕು ಎಂಬ ವಿಚಾರವನ್ನು ಹೈಕಮಾಂಡ್ಗೆ ಬಿಡಿ. ಪಕ್ಷವನ್ನು ಬಲಪಡಿಸಲು ಎಲ್ಲರೂ ಶ್ರಮಿಸಿ’ ಎಂದು ಕಿವಿಮಾತು ಹೇಳಿದ್ದರು.</p>.<p>ಅದೇ ದಿನ ಕೆಲವು ಗಂಟೆಗಳ ನಂತರ, ಶಿವಸೇನಾ ಪಕ್ಷದ 55ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಠಾಕ್ರೆ ಅವರು, ಪಟೋಲೆ ಹಾಗೂ ಜಗತಾಪ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸದೇ ಅವರಿಗೆ ತೀಕ್ಷ್ಣವಾದ ತಿರುಗೇಟು ನೀಡಲು ಈ ವೇದಿಕೆಯನ್ನು ಬಳಸಿಕೊಂಡರು.</p>.<p>‘ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಘೋಷಣೆ ಮಾಡುವ ಸಮಯ ಇದಲ್ಲ. ಆದರೆ, ಜನರ ಸಮಸ್ಯೆಗಳನ್ನು ಪರಿಹರಿಸಲು ಗಮನ ನೀಡದೇ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡುವವರಿಗೆ ಜನರು ಚಪ್ಪಲಿಯಿಂದ ಹೊಡೆಯುತ್ತಾರೆ’ ಎಂದು ಚಾಟಿ ಬೀಸಿದ್ದರು.</p>.<p>ಠಾಕ್ರೆ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿದ ಪಟೋಲೆ, ‘ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಎಂವಿಎ ರಚಿಸಲಾಗಿದೆ. ಈ ಹೊಂದಾಣಿಕೆ ಶಾಶ್ವತವೇನೂ ಅಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>