<p><strong>ಚಂಡೀಗಡ; </strong>ಪಂಜಾಬ್ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರದ ಸಭೆಯಲ್ಲಿ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಒಗ್ಗಟ್ಟು ಪ್ರದರ್ಶಿಸಿದ್ದಾರೆ ಎಂದು ಶಾಸಕರು ಹೇಳಿದ್ದಾರೆ.</p>.<p>ವಿಧಾನಸಭಾ ಚುನಾವಣಾ ಕಾರ್ಯತಂತ್ರದ ಚರ್ಚೆ ನಡೆಸಲು ಮಂಗಳವಾರ ಸಂಜೆ ಕರೆದಿದ್ದ ಶಾಸಕರು ಮತ್ತು ಹಿರಿಯ ನಾಯಕರನ್ನೊಳಗೊಂಡ ಸಭೆಯಲ್ಲಿ ಅವರಿಬ್ಬರು ಪರಸ್ಪರ ಭೇಟಿಯಾದರು. ಮುಂದಿನ ಚುನಾವಣೆಯನ್ನು ಒಟ್ಟಾಗಿ ಎದುರಿಸುವುದಾಗಿ ಉಭಯ ನಾಯಕರು ಘೋಷಿಸಿದರು ಎಂದು ಅವರು ಹೇಳಿದ್ದಾರೆ.</p>.<p>ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷ ಘೋಷಿಸಿದ ದಿನವೇ ಈ ಸಭೆ ನಡೆದಿದೆ,</p>.<p>ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಪಂಜಾಬ್ ಉಸ್ತುವಾರಿ ಹರೀಶ್ ಚೌಧರಿ ಸಹ ಸಭೆಯಲ್ಲಿದ್ದರು, ಚುನಾವಣೆಗೂ ಮುನ್ನ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸಿದೆ.</p>.<p>ಎಲ್ಲವೂ ಸರಿ ಇದೆ ಎಂದು ಸಭೆ ಬಳಿಕ ಸಿಧು ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p>ಇದಕ್ಕೂ ಮುನ್ನ ಸಿಎಂ ಚನ್ನಿ ಮತ್ತು ಚೌಧರಿ ಕೇದಾರನಾಥಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು.</p>.<p>ಸಭೆಯಲ್ಲಿ ಸಿಧು ಮತ್ತು ಚನ್ನಿ ಮುಂದಿನ ಚುನಾವಣೆ ಎದುರಿಸುವ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು ಎಂದು ಶಾಸಕ ನವತೇಜ್ ಸಿಂಗ್ ಚೀಮಾ ಹೇಳಿದ್ದಾರೆ.</p>.<p>ಎಲ್ಲ ನಾಯಕರು ಒಟ್ಟಾಗಿ ಮುಂದಿನ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ; </strong>ಪಂಜಾಬ್ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರದ ಸಭೆಯಲ್ಲಿ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಒಗ್ಗಟ್ಟು ಪ್ರದರ್ಶಿಸಿದ್ದಾರೆ ಎಂದು ಶಾಸಕರು ಹೇಳಿದ್ದಾರೆ.</p>.<p>ವಿಧಾನಸಭಾ ಚುನಾವಣಾ ಕಾರ್ಯತಂತ್ರದ ಚರ್ಚೆ ನಡೆಸಲು ಮಂಗಳವಾರ ಸಂಜೆ ಕರೆದಿದ್ದ ಶಾಸಕರು ಮತ್ತು ಹಿರಿಯ ನಾಯಕರನ್ನೊಳಗೊಂಡ ಸಭೆಯಲ್ಲಿ ಅವರಿಬ್ಬರು ಪರಸ್ಪರ ಭೇಟಿಯಾದರು. ಮುಂದಿನ ಚುನಾವಣೆಯನ್ನು ಒಟ್ಟಾಗಿ ಎದುರಿಸುವುದಾಗಿ ಉಭಯ ನಾಯಕರು ಘೋಷಿಸಿದರು ಎಂದು ಅವರು ಹೇಳಿದ್ದಾರೆ.</p>.<p>ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷ ಘೋಷಿಸಿದ ದಿನವೇ ಈ ಸಭೆ ನಡೆದಿದೆ,</p>.<p>ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಪಂಜಾಬ್ ಉಸ್ತುವಾರಿ ಹರೀಶ್ ಚೌಧರಿ ಸಹ ಸಭೆಯಲ್ಲಿದ್ದರು, ಚುನಾವಣೆಗೂ ಮುನ್ನ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸಿದೆ.</p>.<p>ಎಲ್ಲವೂ ಸರಿ ಇದೆ ಎಂದು ಸಭೆ ಬಳಿಕ ಸಿಧು ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p>ಇದಕ್ಕೂ ಮುನ್ನ ಸಿಎಂ ಚನ್ನಿ ಮತ್ತು ಚೌಧರಿ ಕೇದಾರನಾಥಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು.</p>.<p>ಸಭೆಯಲ್ಲಿ ಸಿಧು ಮತ್ತು ಚನ್ನಿ ಮುಂದಿನ ಚುನಾವಣೆ ಎದುರಿಸುವ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು ಎಂದು ಶಾಸಕ ನವತೇಜ್ ಸಿಂಗ್ ಚೀಮಾ ಹೇಳಿದ್ದಾರೆ.</p>.<p>ಎಲ್ಲ ನಾಯಕರು ಒಟ್ಟಾಗಿ ಮುಂದಿನ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>