<p><strong>ನವದೆಹಲಿ: </strong>ದೇಶದಾದ್ಯಂತ ಐತಿಹಾಸಿಕ ಬೃಹತ್ ‘ಕೊರೊನಾ ಸೋಂಕಿನ ವಿರುದ್ಧದ ಲಸಿಕೆ ಅಭಿಯಾನ‘ ಶನಿವಾರದಿಂದ ಆರಂಭವಾಗಿದೆ.</p>.<p>ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದಂತೆ ದೇಶದ ಎಲ್ಲ ರಾಜ್ಯಗಳಲ್ಲೂ ಏಕಕಾಲಕ್ಕೆ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.</p>.<p>ಒಂದೊಂದು ರಾಜ್ಯಗಳು ಒಂದೊಂದು ರೀತಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದವು. ಕೆಲವು ರಾಜ್ಯಗಳಲ್ಲಿ ಲಸಿಕೆ ಕೇಂದ್ರಗಳನ್ನು ಪುಷ್ಪ, ಬಲೂನ್ಗಳಿಂದ ಅಲಂಕರಿಸಿ, ಆರೋಗ್ಯ ಕಾರ್ಯಕರ್ತರ ಮೇಲೆ ಪುಷ್ಪವೃಷ್ಟಿಗೈದು ಅವರನ್ನು ಸ್ವಾಗತಿಸಲಾಯಿತು. ಇನ್ನೂ ಕೆಲವು ಕಡೆ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಲಸಿಕೆ ಅಭಿಯಾನ ಆರಂಭಿಸಲಾಗಿದೆ.</p>.<p>ಕೆಲವು ರಾಜ್ಯಗಳಲ್ಲಿ ಆಸ್ಪತ್ರೆಯ ಪೌರಕಾರ್ಮಿಕರು ಲಸಿಕೆ ಪಡೆದವರಲ್ಲಿ ಮೊದಲಿಗರಾದರೆ, ಇನ್ನೂ ಕೆಲವು ಕಡೆ ವೈದ್ಯರು, ಹಿರಿಯ ಅಧಿಕಾರಿಗಳು, ಮಾಜಿ ಮತ್ತು ಹಾಲಿ ಸಂಸದರು, ಶಾಸಕರು, ಸಚಿವರು ಮೊದಲ ಬಾರಿಗೆ ಲಸಿಕೆ ಪಡೆದು ಸಾರ್ವಜನಿಕರಲ್ಲಿ ಲಸಿಕೆ ಬಗ್ಗೆ ವಿಶ್ವಾಸ ಮೂಡಿಸುವ ಪ್ರಯತ್ನ ಮಾಡಿದರು.</p>.<p>ದೇಶದ ವಿವಿಧ ಭಾಗಗಳಲ್ಲಿ ಲಸಿಕೆ ಅಭಿಯಾನ ಆರಂಭವಾಗಿರುವ ಕುರಿತ ಸಂಕ್ಷಿಪ್ತ ವರದಿ ಇಲ್ಲಿದೆ.</p>.<p><strong>ಮಹಾರಾಷ್ಟ್ರ:</strong> ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಡೀನ್ ಡಾ. ರಂಜಿತ್ ಮಂಕೇಶ್ವರ್, ಡಾ. ಪದ್ಮಜಾ ಸರಾಫ್ ಅವರು ಇಲ್ಲಿನ ಜಲ್ನಾ ಸಿವಿಲ್ ಆಸ್ಪತ್ರೆಯಲ್ಲಿ ಮೊದಲಿಗರಾಗಿ ಕೋವಿಡ್ ಲಸಿಕೆ ಪಡೆಯುವ ಮೂಲಕ ಮಹಾರಾಷ್ಟ್ರದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ದೊರೆಯಿತು.<br />ಮಹಾರಾಷ್ಟ್ರದ 285 ಕೇಂದ್ರಗಳನ್ನು ಕೋವಿಡ್ ಲಸಿಕಾ ಕೇಂದ್ರಗಳೆಂದು ಗುರುತಿಸಲಾಗಿದೆ. ಪ್ರತಿ ದಿನ 100 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗುತ್ತದೆ. 28,500 ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾಜ್ಯಕ್ಕೆ 9.63 ಲಕ್ಷ ಡೋಸ್ನಷ್ಟು ಕೋವಿಶೀಲ್ಡ್ ಲಸಿಕೆ ಹಾಗೂ 20 ಸಾವಿರ ಡೋಸ್ಗಳಷ್ಟು ಕೊವ್ಯಾಕ್ಸಿನ್ ಲಸಿಕೆ ಬಂದಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಅದನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಹಂಚಿಕೆ ಮಾಡಲಾಗಿದೆ.</p>.<p><strong>ಮಧ್ಯಪ್ರದೇಶ</strong>: ರಾಜ್ಯದ ಕೆಲವು ಕಡೆ ವೈದ್ಯರು ಪೂಜೆ ಸಲ್ಲಿಸಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರೆ, ಇನ್ನೂ ಕೆಲವು ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ಪುಷ್ಪವೃಷ್ಟಿಯೊಂದಿಗೆ ಸ್ವಾಗತಿಸಲಾಯಿತು.</p>.<p>ಗ್ವಾಲಿಯರ್ನಲ್ಲಿ ಲಸಿಕೆ ಅಭಿಯಾನ ಆರಂಭವಾಗುವ ಮುನ್ನ ವೈದ್ಯರು ಹನುಮಾನ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಗ್ವಾಲಿಯರ್, ಇಂದೋರ್, ಭೋಪಾಲ್ ನಗರದ ಕೆಲವು ಕೇಂದ್ರಗಳಲ್ಲಿ ಲಸಿಕೆ ಕೇಂದ್ರಗಳನ್ನು ಪುಷ್ಪ ಮತ್ತು ಬಲೂನ್ಗಳಿಂದ ಅಲಂಕರಿಸಲಾಗಿತ್ತು. ಪೌರಕಾರ್ಮಿಕರೊಬ್ಬರಿಗೆ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ದೊರೆಯಿತು.</p>.<p>ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಕೊರೊನಾ ಯೋಧರಿಗೆ‘ ಧನ್ಯವಾದ ಹೇಳಿದರು. ಭೋಪಾಲ್ನ 12 ಕೇಂದ್ರಗಳನ್ನು ಒಳಗೊಂಡಂತೆ ಮಧ್ಯಪ್ರದೇಶದ 150 ಕೇಂದ್ರಗಳಲ್ಲಿ ಈ ಅಭಿಯಾನ ನಡೆಯುತ್ತಿದೆ.</p>.<p>ರಾಜ್ಯದಲ್ಲಿ ಮೊದಲ ಹಂತದಲ್ಲಿ 4.17 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಗಳನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಗೋವಾ:</strong> ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ರಾಜ್ಯದಲ್ಲಿ ‘ಲಸಿಕೆ ಅಭಿಯಾನ‘ಕ್ಕೆ ಚಾಲನೆ ನೀಡಲಾಯಿತು.</p>.<p>ಎರಡು ಖಾಸಗಿ ಆಸ್ಪತ್ರೆ ಸೇರಿ, ರಾಜ್ಯದ ಏಳು ವಿವಿಧ ಕೇಂದ್ರಗಳಲ್ಲಿ ಲಸಿಕೆ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಜರಿದ್ದರು.</p>.<p>ದಕ್ಷಿಣ ಗೋವಾದಲ್ಲಿರುವ ಮಾರ್ಗೊವಾ ಟಿ.ಬಿ. ಆಸ್ಪತ್ರೆಯಲ್ಲಿ ವೈದ್ಯ ಡಾ. ಇರಾ ಅಲ್ಮೆಡಾ ಅವರು ಲಸಿಕೆ ಹಾಕಿಸಿಕೊಂಡರು.</p>.<p><strong>ಛತ್ತೀಸ್ಗಡ</strong>: ರಾಯಪುರದ ಡಾ. ಬಿ.ಆರ್. ಅಂಬೇಡ್ಕರ್ ಆಸ್ಪತ್ರೆಯ 51 ವರ್ಷದ ಮಹಿಳಾ ಪೌರಕಾರ್ಮಿಕರಿಗೆ ಕೊರೊನಾ ಲಸಿಕೆ ಹಾಕುವ ಮೂಲಕ, ರಾಜ್ಯದಾದ್ಯಂತ ‘ಲಸಿಕಾ ಅಭಿಯಾನ‘ಕ್ಕೆ ಚಾಲನೆ ನೀಡಲಾಯಿತು.</p>.<p>ಪ್ರಧಾನಿಯವರು ಲಸಿಕೆ ಅಭಿಯಾನಕ್ಕೆ ದೆಹಲಿಯಲ್ಲಿ ಔಪಚಾರಿಕ ಚಾಲನೆ ನೀಡಿದ ನಂತರ, ರಾಜ್ಯ 97 ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಆರಂಭವಾಯಿತು ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ ರಾಜ್ಯ ನಿರ್ದೇಶಕಿ ಪ್ರಿಯಾಂಕಾ ಶುಕ್ಲಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p><strong>ತಮಿಳುನಾಡು: </strong>ತಮಿಳುನಾಡು ಸರ್ಕಾರಿ ವೈದ್ಯಕೀಯ ಸಂಘದ (ಟಿಎನ್ಜಿಡಿಎ) ಅಧ್ಯಕ್ಷ ಡಾ. ಕೆ.ಸೆಂಥಿಲ್ ಅವರು ರಾಜಾಜಿ ಆಸ್ಪತ್ರೆ ಆವರಣದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ‘ಲಸಿಕೆ ಅಭಿಯಾನ’ ಆರಂಭವಾಯಿತು.</p>.<p>ಮುಖ್ಯಮಂತ್ರಿ ಪಳನಿಸ್ವಾಮಿ, ಸಂಪುಟ ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸೆಂಥಿಲ್ ಅವರು ಲಸಿಕೆ ಪಡೆದರು. ರಾಜ್ಯದಾದ್ಯಂತ 166 ತಾಣಗಳಲ್ಲಿ ಲಸಿಕೆ ಅಭಿಯಾನ ಆರಂಭವಾಯಿತು.</p>.<p><strong>ನವದೆಹಲಿ</strong>: ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಯ ಪೌರಕಾರ್ಮಿಕ ಮನೀಶ್ ಕುಮಾರ್ ಅವರಿಗೆ ಲಸಿಕೆ ಹಾಕುವ ಮೂಲಕ ರಾಜಧಾನಿ ದೆಹಲಿಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.</p>.<p>ಸುತ್ತಲೂ ಸೇರಿದ್ದ ಜನರು ಚಪ್ಪಾಳೆ ತಟ್ಟಿ ಲಸಿಕೆ ಅಭಿಯಾನಕ್ಕೆ ಶುಭ ಕೋರುತ್ತಿದ್ದಂತೆ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಕೂಡ ಲಸಿಕೆ ಪಡೆದರು. ಈ ವೇಳೆ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಹಾಜರಿದ್ದರು.</p>.<p>ಭಾರತದಲ್ಲೇ ತಯಾರಾದ ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಎರಡೂ ಲಸಿಕೆಗಳನ್ನು ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ‘ಸಂಜೀವಿನಿ‘ಯಾಗಿವೆ ಎಂದು ಹರ್ಷವರ್ಧನ್ ಹೇಳಿದರು.</p>.<p>‘ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ‘ಲಸಿಕೆಗಳು’ ಸಂಜೀವಿಗಳಾಗಿವೆ. ನಾವು ಪೋಲಿಯೊ ವಿರುದ್ಧದ ಯುದ್ಧ ಮಾಡಿ ಗೆದ್ದಿದ್ದೇವೆ. ಈಗ ಕೋವಿಡ್ ವಿರುದ್ಧದ ಯುದ್ಧದಲ್ಲಿ ಗೆಲುವಿನ ನಿರ್ಣಾಯಕ ಹಂತ ತಲುಪಿದ್ದೇವೆ’ ಎಂದರು. ಈ ಸಂದರ್ಭದಲ್ಲಿ ಎಲ್ಲ ಕೊರೊನಾ ವಾರಿಯರ್ಗಳಿಗೆ ಸಚಿವರು ಕೃತಜ್ಞತೆ ಸಲ್ಲಿಸಿದರು.</p>.<p><strong>ಗುಜರಾತ್:</strong> ರಾಜ್ಕೋಟ್ ಜಿಲ್ಲೆಯಲ್ಲಿ ವೈದ್ಯಕೀಯ ವಾಹನದ ಚಾಲಕ ಅಶೋಕ್ ಭಾಯ್, ಕೊರೊನಾ ಲಸಿಕೆ ಪಡೆಯುವ ಮೂಲಕ ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.</p>.<p>‘ರಾಜ್ಕೋಟ್ನ ಈ ಕೇಂದ್ರದಲ್ಲಿ ಮೊದಲ ಡೋಸ್ ಲಸಿಕೆಗಾಗಿ ನನ್ನ ಹೆಸರನ್ನು ಆಯ್ಕೆ ಮಾಡಿದಾಗ, ತುಂಬಾ ಹೆಮ್ಮೆ ಎನ್ನಿಸಿತು. ಲಸಿಕೆ ಪಡೆಯುವ ಬಗ್ಗೆ ನನಗೆ ಯಾವುದೇ ಆತಂಕವಿರಲಿಲ್ಲ. ಎಲ್ಲರೂ ಇದನ್ನು ತೆಗೆದುಕೊಳ್ಳಬೇಕು‘ ಎಂದು ಅಶೋಕ್ ಭಾಯ್ ಸುದ್ದಿಗಾರರಿಗೆ ತಿಳಿಸಿದರು.</p>.<p>ಅಹಮದಾಬಾದ್ನ ಸಿವಿಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಮಾಜಿ ಅಧ್ಯಕ್ಷ ಡಾ.ಕೇತನ್ ದೇಸಾಯಿ ಎರಡನೇ ವ್ಯಕ್ತಿಯಾಗಿ ಲಸಿಕೆ ಪಡೆದರು. </p>.<p>ರಾಜ್ಯದ 161 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಏಕಕಾಲದಲ್ಲಿ ಲಸಿಕೆ ನೀಡುವ ಮೂಲಕ ಅಭಿಯಾನ ಆರಂಭವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಾದ್ಯಂತ ಐತಿಹಾಸಿಕ ಬೃಹತ್ ‘ಕೊರೊನಾ ಸೋಂಕಿನ ವಿರುದ್ಧದ ಲಸಿಕೆ ಅಭಿಯಾನ‘ ಶನಿವಾರದಿಂದ ಆರಂಭವಾಗಿದೆ.</p>.<p>ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದಂತೆ ದೇಶದ ಎಲ್ಲ ರಾಜ್ಯಗಳಲ್ಲೂ ಏಕಕಾಲಕ್ಕೆ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.</p>.<p>ಒಂದೊಂದು ರಾಜ್ಯಗಳು ಒಂದೊಂದು ರೀತಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದವು. ಕೆಲವು ರಾಜ್ಯಗಳಲ್ಲಿ ಲಸಿಕೆ ಕೇಂದ್ರಗಳನ್ನು ಪುಷ್ಪ, ಬಲೂನ್ಗಳಿಂದ ಅಲಂಕರಿಸಿ, ಆರೋಗ್ಯ ಕಾರ್ಯಕರ್ತರ ಮೇಲೆ ಪುಷ್ಪವೃಷ್ಟಿಗೈದು ಅವರನ್ನು ಸ್ವಾಗತಿಸಲಾಯಿತು. ಇನ್ನೂ ಕೆಲವು ಕಡೆ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಲಸಿಕೆ ಅಭಿಯಾನ ಆರಂಭಿಸಲಾಗಿದೆ.</p>.<p>ಕೆಲವು ರಾಜ್ಯಗಳಲ್ಲಿ ಆಸ್ಪತ್ರೆಯ ಪೌರಕಾರ್ಮಿಕರು ಲಸಿಕೆ ಪಡೆದವರಲ್ಲಿ ಮೊದಲಿಗರಾದರೆ, ಇನ್ನೂ ಕೆಲವು ಕಡೆ ವೈದ್ಯರು, ಹಿರಿಯ ಅಧಿಕಾರಿಗಳು, ಮಾಜಿ ಮತ್ತು ಹಾಲಿ ಸಂಸದರು, ಶಾಸಕರು, ಸಚಿವರು ಮೊದಲ ಬಾರಿಗೆ ಲಸಿಕೆ ಪಡೆದು ಸಾರ್ವಜನಿಕರಲ್ಲಿ ಲಸಿಕೆ ಬಗ್ಗೆ ವಿಶ್ವಾಸ ಮೂಡಿಸುವ ಪ್ರಯತ್ನ ಮಾಡಿದರು.</p>.<p>ದೇಶದ ವಿವಿಧ ಭಾಗಗಳಲ್ಲಿ ಲಸಿಕೆ ಅಭಿಯಾನ ಆರಂಭವಾಗಿರುವ ಕುರಿತ ಸಂಕ್ಷಿಪ್ತ ವರದಿ ಇಲ್ಲಿದೆ.</p>.<p><strong>ಮಹಾರಾಷ್ಟ್ರ:</strong> ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಡೀನ್ ಡಾ. ರಂಜಿತ್ ಮಂಕೇಶ್ವರ್, ಡಾ. ಪದ್ಮಜಾ ಸರಾಫ್ ಅವರು ಇಲ್ಲಿನ ಜಲ್ನಾ ಸಿವಿಲ್ ಆಸ್ಪತ್ರೆಯಲ್ಲಿ ಮೊದಲಿಗರಾಗಿ ಕೋವಿಡ್ ಲಸಿಕೆ ಪಡೆಯುವ ಮೂಲಕ ಮಹಾರಾಷ್ಟ್ರದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ದೊರೆಯಿತು.<br />ಮಹಾರಾಷ್ಟ್ರದ 285 ಕೇಂದ್ರಗಳನ್ನು ಕೋವಿಡ್ ಲಸಿಕಾ ಕೇಂದ್ರಗಳೆಂದು ಗುರುತಿಸಲಾಗಿದೆ. ಪ್ರತಿ ದಿನ 100 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗುತ್ತದೆ. 28,500 ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾಜ್ಯಕ್ಕೆ 9.63 ಲಕ್ಷ ಡೋಸ್ನಷ್ಟು ಕೋವಿಶೀಲ್ಡ್ ಲಸಿಕೆ ಹಾಗೂ 20 ಸಾವಿರ ಡೋಸ್ಗಳಷ್ಟು ಕೊವ್ಯಾಕ್ಸಿನ್ ಲಸಿಕೆ ಬಂದಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಅದನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಹಂಚಿಕೆ ಮಾಡಲಾಗಿದೆ.</p>.<p><strong>ಮಧ್ಯಪ್ರದೇಶ</strong>: ರಾಜ್ಯದ ಕೆಲವು ಕಡೆ ವೈದ್ಯರು ಪೂಜೆ ಸಲ್ಲಿಸಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರೆ, ಇನ್ನೂ ಕೆಲವು ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ಪುಷ್ಪವೃಷ್ಟಿಯೊಂದಿಗೆ ಸ್ವಾಗತಿಸಲಾಯಿತು.</p>.<p>ಗ್ವಾಲಿಯರ್ನಲ್ಲಿ ಲಸಿಕೆ ಅಭಿಯಾನ ಆರಂಭವಾಗುವ ಮುನ್ನ ವೈದ್ಯರು ಹನುಮಾನ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಗ್ವಾಲಿಯರ್, ಇಂದೋರ್, ಭೋಪಾಲ್ ನಗರದ ಕೆಲವು ಕೇಂದ್ರಗಳಲ್ಲಿ ಲಸಿಕೆ ಕೇಂದ್ರಗಳನ್ನು ಪುಷ್ಪ ಮತ್ತು ಬಲೂನ್ಗಳಿಂದ ಅಲಂಕರಿಸಲಾಗಿತ್ತು. ಪೌರಕಾರ್ಮಿಕರೊಬ್ಬರಿಗೆ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ದೊರೆಯಿತು.</p>.<p>ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಕೊರೊನಾ ಯೋಧರಿಗೆ‘ ಧನ್ಯವಾದ ಹೇಳಿದರು. ಭೋಪಾಲ್ನ 12 ಕೇಂದ್ರಗಳನ್ನು ಒಳಗೊಂಡಂತೆ ಮಧ್ಯಪ್ರದೇಶದ 150 ಕೇಂದ್ರಗಳಲ್ಲಿ ಈ ಅಭಿಯಾನ ನಡೆಯುತ್ತಿದೆ.</p>.<p>ರಾಜ್ಯದಲ್ಲಿ ಮೊದಲ ಹಂತದಲ್ಲಿ 4.17 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಗಳನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಗೋವಾ:</strong> ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ರಾಜ್ಯದಲ್ಲಿ ‘ಲಸಿಕೆ ಅಭಿಯಾನ‘ಕ್ಕೆ ಚಾಲನೆ ನೀಡಲಾಯಿತು.</p>.<p>ಎರಡು ಖಾಸಗಿ ಆಸ್ಪತ್ರೆ ಸೇರಿ, ರಾಜ್ಯದ ಏಳು ವಿವಿಧ ಕೇಂದ್ರಗಳಲ್ಲಿ ಲಸಿಕೆ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಜರಿದ್ದರು.</p>.<p>ದಕ್ಷಿಣ ಗೋವಾದಲ್ಲಿರುವ ಮಾರ್ಗೊವಾ ಟಿ.ಬಿ. ಆಸ್ಪತ್ರೆಯಲ್ಲಿ ವೈದ್ಯ ಡಾ. ಇರಾ ಅಲ್ಮೆಡಾ ಅವರು ಲಸಿಕೆ ಹಾಕಿಸಿಕೊಂಡರು.</p>.<p><strong>ಛತ್ತೀಸ್ಗಡ</strong>: ರಾಯಪುರದ ಡಾ. ಬಿ.ಆರ್. ಅಂಬೇಡ್ಕರ್ ಆಸ್ಪತ್ರೆಯ 51 ವರ್ಷದ ಮಹಿಳಾ ಪೌರಕಾರ್ಮಿಕರಿಗೆ ಕೊರೊನಾ ಲಸಿಕೆ ಹಾಕುವ ಮೂಲಕ, ರಾಜ್ಯದಾದ್ಯಂತ ‘ಲಸಿಕಾ ಅಭಿಯಾನ‘ಕ್ಕೆ ಚಾಲನೆ ನೀಡಲಾಯಿತು.</p>.<p>ಪ್ರಧಾನಿಯವರು ಲಸಿಕೆ ಅಭಿಯಾನಕ್ಕೆ ದೆಹಲಿಯಲ್ಲಿ ಔಪಚಾರಿಕ ಚಾಲನೆ ನೀಡಿದ ನಂತರ, ರಾಜ್ಯ 97 ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಆರಂಭವಾಯಿತು ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ ರಾಜ್ಯ ನಿರ್ದೇಶಕಿ ಪ್ರಿಯಾಂಕಾ ಶುಕ್ಲಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p><strong>ತಮಿಳುನಾಡು: </strong>ತಮಿಳುನಾಡು ಸರ್ಕಾರಿ ವೈದ್ಯಕೀಯ ಸಂಘದ (ಟಿಎನ್ಜಿಡಿಎ) ಅಧ್ಯಕ್ಷ ಡಾ. ಕೆ.ಸೆಂಥಿಲ್ ಅವರು ರಾಜಾಜಿ ಆಸ್ಪತ್ರೆ ಆವರಣದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ‘ಲಸಿಕೆ ಅಭಿಯಾನ’ ಆರಂಭವಾಯಿತು.</p>.<p>ಮುಖ್ಯಮಂತ್ರಿ ಪಳನಿಸ್ವಾಮಿ, ಸಂಪುಟ ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸೆಂಥಿಲ್ ಅವರು ಲಸಿಕೆ ಪಡೆದರು. ರಾಜ್ಯದಾದ್ಯಂತ 166 ತಾಣಗಳಲ್ಲಿ ಲಸಿಕೆ ಅಭಿಯಾನ ಆರಂಭವಾಯಿತು.</p>.<p><strong>ನವದೆಹಲಿ</strong>: ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಯ ಪೌರಕಾರ್ಮಿಕ ಮನೀಶ್ ಕುಮಾರ್ ಅವರಿಗೆ ಲಸಿಕೆ ಹಾಕುವ ಮೂಲಕ ರಾಜಧಾನಿ ದೆಹಲಿಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.</p>.<p>ಸುತ್ತಲೂ ಸೇರಿದ್ದ ಜನರು ಚಪ್ಪಾಳೆ ತಟ್ಟಿ ಲಸಿಕೆ ಅಭಿಯಾನಕ್ಕೆ ಶುಭ ಕೋರುತ್ತಿದ್ದಂತೆ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಕೂಡ ಲಸಿಕೆ ಪಡೆದರು. ಈ ವೇಳೆ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಹಾಜರಿದ್ದರು.</p>.<p>ಭಾರತದಲ್ಲೇ ತಯಾರಾದ ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಎರಡೂ ಲಸಿಕೆಗಳನ್ನು ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ‘ಸಂಜೀವಿನಿ‘ಯಾಗಿವೆ ಎಂದು ಹರ್ಷವರ್ಧನ್ ಹೇಳಿದರು.</p>.<p>‘ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ‘ಲಸಿಕೆಗಳು’ ಸಂಜೀವಿಗಳಾಗಿವೆ. ನಾವು ಪೋಲಿಯೊ ವಿರುದ್ಧದ ಯುದ್ಧ ಮಾಡಿ ಗೆದ್ದಿದ್ದೇವೆ. ಈಗ ಕೋವಿಡ್ ವಿರುದ್ಧದ ಯುದ್ಧದಲ್ಲಿ ಗೆಲುವಿನ ನಿರ್ಣಾಯಕ ಹಂತ ತಲುಪಿದ್ದೇವೆ’ ಎಂದರು. ಈ ಸಂದರ್ಭದಲ್ಲಿ ಎಲ್ಲ ಕೊರೊನಾ ವಾರಿಯರ್ಗಳಿಗೆ ಸಚಿವರು ಕೃತಜ್ಞತೆ ಸಲ್ಲಿಸಿದರು.</p>.<p><strong>ಗುಜರಾತ್:</strong> ರಾಜ್ಕೋಟ್ ಜಿಲ್ಲೆಯಲ್ಲಿ ವೈದ್ಯಕೀಯ ವಾಹನದ ಚಾಲಕ ಅಶೋಕ್ ಭಾಯ್, ಕೊರೊನಾ ಲಸಿಕೆ ಪಡೆಯುವ ಮೂಲಕ ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.</p>.<p>‘ರಾಜ್ಕೋಟ್ನ ಈ ಕೇಂದ್ರದಲ್ಲಿ ಮೊದಲ ಡೋಸ್ ಲಸಿಕೆಗಾಗಿ ನನ್ನ ಹೆಸರನ್ನು ಆಯ್ಕೆ ಮಾಡಿದಾಗ, ತುಂಬಾ ಹೆಮ್ಮೆ ಎನ್ನಿಸಿತು. ಲಸಿಕೆ ಪಡೆಯುವ ಬಗ್ಗೆ ನನಗೆ ಯಾವುದೇ ಆತಂಕವಿರಲಿಲ್ಲ. ಎಲ್ಲರೂ ಇದನ್ನು ತೆಗೆದುಕೊಳ್ಳಬೇಕು‘ ಎಂದು ಅಶೋಕ್ ಭಾಯ್ ಸುದ್ದಿಗಾರರಿಗೆ ತಿಳಿಸಿದರು.</p>.<p>ಅಹಮದಾಬಾದ್ನ ಸಿವಿಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಮಾಜಿ ಅಧ್ಯಕ್ಷ ಡಾ.ಕೇತನ್ ದೇಸಾಯಿ ಎರಡನೇ ವ್ಯಕ್ತಿಯಾಗಿ ಲಸಿಕೆ ಪಡೆದರು. </p>.<p>ರಾಜ್ಯದ 161 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಏಕಕಾಲದಲ್ಲಿ ಲಸಿಕೆ ನೀಡುವ ಮೂಲಕ ಅಭಿಯಾನ ಆರಂಭವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>