ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣಾ ರ್ಯಾಲಿಗಳನ್ನು ಆಯೋಜಿಸಿ ಲಕ್ಷಾಂತರ ಜನರು ಒಂದೆಡೆ ಸೇರುವಂತೆ ಮಾಡುತ್ತಿವೆ. ಈ ರ್ಯಾಲಿಗಳಲ್ಲಿ ದೈಹಿಕ ಅಂತರ ಸೇರಿ ಕೋವಿಡ್ಗೆ ಸಂಬಂಧಿಸಿದ ಯಾವುದೇ ರೀತಿಯ ಮುನ್ನೆಚ್ಚರಿಕೆಗಳನ್ನು ಪಾಲಿಸಲು ಸಾಧ್ಯವಿಲ್ಲ. ಹಾಗಾಗಿ, ರಾಜಕೀಯ ಸಮಾವೇಶಗಳನ್ನು ಕೂಡಲೇ ನಿಲ್ಲಿಸದಿದ್ದರೆ ಪರಿಸ್ಥಿತಿ ಎರಡನೇ ಅಲೆಗಿಂತ ಬಿಗಡಾಯಿಸಲಿದೆ.ಕೂಡಲೇ ರಾಜಕೀಯ ಸಮಾವೇಶಗಳನ್ನು ನಿಲ್ಲಿಸಿ, ರಾಜಕೀಯ ಪಕ್ಷಗಳಿಗೆ ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಮೂಲಕ ಪ್ರಚಾರ ನಡೆಸುವಂತೆ ಆದೇಶಿಸಬೇಕು ಎಂದು ಕೋರ್ಟ್ ಹೇಳಿದೆ.