<p><strong>ನವದೆಹಲಿ:</strong> ಬೆಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಜೀರ್ ಮದನಿಗೆ ಕೇರಳಕ್ಕೆ ಭೇಟಿ ನೀಡಲು, ಅಲ್ಲಿನ ತನ್ನ ಮನೆಯಲ್ಲಿ ವಾಸಿಸಲು ಅನುಮತಿ ನೀಡುವುದು ದೇಶದ ಭದ್ರತೆಗೆ ಅಪಾಯ ತಂದೊಡ್ಡಲಿದೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.</p>.<p>ಈ ವಿಷಯದಲ್ಲಿ ಅನುಮತಿ ನೀಡಿದರೆ, ಆತ ಪರಾರಿಯಾಗಲು ಸಾಧ್ಯವಾಗುವುದು. ಇದೇ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಈಗ ತಲೆಮರೆಸಿಕೊಂಡಿರುವವರೊಂದಿಗೆ ಮತ್ತೆ ಸಂಪರ್ಕ ಬೆಳೆಸಿಕೊಂಡು ಆತ ಇನ್ನಷ್ಟೂ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದೂ ಕರ್ನಾಟಕ ತಿಳಿಸಿದೆ.</p>.<p>ಕೋರ್ಟ್ನ ಅನುಮತಿ ಇಲ್ಲದೇ ಬೆಂಗಳೂರಿನಿಂದ ಹೊರಗೆ ಹೋಗುವಂತಿಲ್ಲ ಎಂಬ ಜಾಮೀನಿಗೆ ಸಂಬಂಧಿಸಿದ ನಿರ್ಬಂಧವನ್ನು ಸಡಿಲಿಸುವಂತೆ ಕೋರಿ ಮದನಿ ಸಲ್ಲಿಸಿದ್ದ ಅರ್ಜಿಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿದ ವೇಳೆಯಲ್ಲಿ ಈ ವಿಷಯವನ್ನು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೆಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಜೀರ್ ಮದನಿಗೆ ಕೇರಳಕ್ಕೆ ಭೇಟಿ ನೀಡಲು, ಅಲ್ಲಿನ ತನ್ನ ಮನೆಯಲ್ಲಿ ವಾಸಿಸಲು ಅನುಮತಿ ನೀಡುವುದು ದೇಶದ ಭದ್ರತೆಗೆ ಅಪಾಯ ತಂದೊಡ್ಡಲಿದೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.</p>.<p>ಈ ವಿಷಯದಲ್ಲಿ ಅನುಮತಿ ನೀಡಿದರೆ, ಆತ ಪರಾರಿಯಾಗಲು ಸಾಧ್ಯವಾಗುವುದು. ಇದೇ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಈಗ ತಲೆಮರೆಸಿಕೊಂಡಿರುವವರೊಂದಿಗೆ ಮತ್ತೆ ಸಂಪರ್ಕ ಬೆಳೆಸಿಕೊಂಡು ಆತ ಇನ್ನಷ್ಟೂ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದೂ ಕರ್ನಾಟಕ ತಿಳಿಸಿದೆ.</p>.<p>ಕೋರ್ಟ್ನ ಅನುಮತಿ ಇಲ್ಲದೇ ಬೆಂಗಳೂರಿನಿಂದ ಹೊರಗೆ ಹೋಗುವಂತಿಲ್ಲ ಎಂಬ ಜಾಮೀನಿಗೆ ಸಂಬಂಧಿಸಿದ ನಿರ್ಬಂಧವನ್ನು ಸಡಿಲಿಸುವಂತೆ ಕೋರಿ ಮದನಿ ಸಲ್ಲಿಸಿದ್ದ ಅರ್ಜಿಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿದ ವೇಳೆಯಲ್ಲಿ ಈ ವಿಷಯವನ್ನು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>