ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಿಂದರ್ ಸಿಂಗ್, ಜಾಖರ್‌ರನ್ನು ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಿದ ಬಿಜೆಪಿ

Last Updated 2 ಡಿಸೆಂಬರ್ 2022, 10:22 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಮಾಜಿ ಸಂಸದ ಸುನೀಲ್ ಜಾಖರ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ಕಾಂಗ್ರೆಸ್ ಮಾಜಿ ವಕ್ತಾರ ಜೈವೀರ್‌ ಶೆರ್ಗಿಲ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ಹೇಳಿದೆ.

ಅಮರಿಂದರ್ ಸಿಂಗ್ ಅವರುಹೊಸದಾಗಿ ಸ್ಥಾಪಿಸಿದ್ದ ಪಂಜಾಬ್ ಲೋಕ ಕಾಂಗ್ರೆಸ್‌(ಪಿಎಲ್‌ಸಿ) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ,2022ರ ಸೆ.19ರಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಅನಿರೀಕ್ಷಿತವಾಗಿ ನಿರ್ಗಮಿಸಿದ ಬಳಿಕ ಕಾಂಗ್ರೆಸ್ ತೊರೆದಿದ್ದರು. ಬಳಿಕ ಅವರು ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದರು.

ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT