ಕಾಂಗ್ರೆಸ್ ಪಕ್ಷದಲ್ಲಿ ಕೋಪಕ್ಕೆ ಜಾಗವಿಲ್ಲ ಎಂದು ದಿಲ್ಲಿಯಲ್ಲಿ ಗುರುವಾರ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಹೇಳಿದ್ದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಅಮರಿಂದರ್ ಸಿಂಗ್, ಹಿರಿಯ ನಾಯಕನಾದ ನನ್ನನ್ನೇ ಹೀಗೆ ನಡೆಸಿಕೊಂಡರೆ, ಸಾಮಾನ್ಯ ಕಾರ್ಯಕರ್ತರ ಭವಿಷ್ಯವೇನು? ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ.