ಪಕ್ಷದಲ್ಲಿ ತನಗೆ ಅಪಮಾನವಾಗಿದೆ ಎಂದು ಹೇಳಿ, ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್ ಅವರು, ನಿನ್ನೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಪಂಜಾಬ್ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಕ್ಕೆ ಎಡೆಮಾಡಿತ್ತು. ಆದರೆ, ಇಂದು ಅವರು ಬಿಜೆಪಿ ಪಕ್ಷ ಸೇರುವುದಿಲ್ಲ. ಕಾಂಗ್ರೆಸ್ ಪಕ್ಷ ತೊರೆಯುತ್ತೇನೆ ಎಂದು ಖಚಿತಪಡಿಸಿದ್ದಾರೆ.