‘ಯಾತ್ರೆಯಲ್ಲಿ ಭಾಗಿಯಾಗಿರುವ ಭಕ್ತರ ಮೇಲೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಹೀಗಾಗಿದಕ್ಷಿಣ ಹಾಗೂ ಕೇಂದ್ರ ಕಾಶ್ಮೀರದ ಗುಡ್ಡಗಾಡು ಪ್ರದೇಶ ಸೇರಿದಂತೆ ಭಕ್ತರು ಸಾಗುವ ಮಾರ್ಗದ ಉದ್ದಕ್ಕೂ ಮೂರು ಹಂತದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಹೆದ್ದಾರಿಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.