<p><strong>ಶ್ರೀನಗರ (ಪಿಟಿಐ): </strong>ದಕ್ಷಿಣ ಕಾಶ್ಮೀರದ ಪವಿತ್ರ ಗುಹಾಲಯದ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಒಟ್ಟು 40,223 ಭಕ್ತರು ಭೇಟಿ ನೀಡಿದ್ದು, ಐದು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>‘ಚಂದನ್ವಾರಿ-ಶೇಷನಾಗ್ ಮಾರ್ಗದಿಂದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವೀರಿಂದರ್ ಗುಪ್ತಾ ಎಂಬ ಯಾತ್ರಿ ಕಾಣೆಯಾಗಿದ್ದಾರೆ. ಹಾಗೂ ದೆಹಲಿಯ ಜೈ ಪ್ರಕಾಶ್,ಬರೇಲಿಯ ದೇವೆಂದರ್ ತಯಾಲ್ (53) ಮತ್ತುಬಿಹಾರದ ಲಿಪೋ ಶರ್ಮಾ (40) ಎಂಬಮೂವರು ಹೃದಯಾಘಾತದಿಂದ ನಿಧನರಾಗಿದ್ದಾರೆ.’</p>.<p>‘ಮಹಾರಾಷ್ಟ್ರದ ಜಗನ್ನಾಥ್ (61) ಅವರು ಪಿಸುಟಾಪ್ನಲ್ಲಿ ಕೆಲವು ಆರೋಗ್ಯ ಸ್ಥಿತಿಯಿಂದ ಹಾಗೂ ರಾಜಸ್ಥಾನದ ಅಶು ಸಿಂಗ್ (46) ಎಂಜಿ ಟಾಪ್ನಲ್ಲಿ ಕುದುರೆಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ’ ಎಂದು ಅವರು ಹೇಳಿದರು.</p>.<p>ಜೂನ್ 30ರಂದು ಪ್ರಾರಂಭವಾಗಿರುವ ಅಮರನಾಥ ಯಾತ್ರೆಯು ಆಗಸ್ಟ್ 11 ರಂದು ಮುಕ್ತಾಯಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ (ಪಿಟಿಐ): </strong>ದಕ್ಷಿಣ ಕಾಶ್ಮೀರದ ಪವಿತ್ರ ಗುಹಾಲಯದ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಒಟ್ಟು 40,223 ಭಕ್ತರು ಭೇಟಿ ನೀಡಿದ್ದು, ಐದು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>‘ಚಂದನ್ವಾರಿ-ಶೇಷನಾಗ್ ಮಾರ್ಗದಿಂದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವೀರಿಂದರ್ ಗುಪ್ತಾ ಎಂಬ ಯಾತ್ರಿ ಕಾಣೆಯಾಗಿದ್ದಾರೆ. ಹಾಗೂ ದೆಹಲಿಯ ಜೈ ಪ್ರಕಾಶ್,ಬರೇಲಿಯ ದೇವೆಂದರ್ ತಯಾಲ್ (53) ಮತ್ತುಬಿಹಾರದ ಲಿಪೋ ಶರ್ಮಾ (40) ಎಂಬಮೂವರು ಹೃದಯಾಘಾತದಿಂದ ನಿಧನರಾಗಿದ್ದಾರೆ.’</p>.<p>‘ಮಹಾರಾಷ್ಟ್ರದ ಜಗನ್ನಾಥ್ (61) ಅವರು ಪಿಸುಟಾಪ್ನಲ್ಲಿ ಕೆಲವು ಆರೋಗ್ಯ ಸ್ಥಿತಿಯಿಂದ ಹಾಗೂ ರಾಜಸ್ಥಾನದ ಅಶು ಸಿಂಗ್ (46) ಎಂಜಿ ಟಾಪ್ನಲ್ಲಿ ಕುದುರೆಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ’ ಎಂದು ಅವರು ಹೇಳಿದರು.</p>.<p>ಜೂನ್ 30ರಂದು ಪ್ರಾರಂಭವಾಗಿರುವ ಅಮರನಾಥ ಯಾತ್ರೆಯು ಆಗಸ್ಟ್ 11 ರಂದು ಮುಕ್ತಾಯಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>