<p>ಜಮ್ಮು: ದಕ್ಷಿಣ ಕಾಶ್ಮೀರದ ಪವಿತ್ರ ಗುಹಾಲಯದ ಸಮೀಪದಲ್ಲಿ ಶುಕ್ರವಾರ ಉಂಟಾದ ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದಅಮರನಾಥ ಯಾತ್ರೆ ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದೆ.</p>.<p>ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/heavy-rains-landslides-water-level-in-reservoirs-rise-953281.html" itemprop="url">ಮಳೆ ತೀವ್ರ: ಭೂಕುಸಿತ, ಜಲಾಶಯಗಳ ನೀರಿನ ಮಟ್ಟ ಏರಿಕೆ </a></p>.<p>ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು.</p>.<p>ಈಗ ತೀರ್ಥಯಾತ್ರೆ ಪುನರಾರಂಭವಾಗಿದ್ದು, ಅಮರನಾಥ ಯಾತ್ರಿಕರ ಹೊಸ ಬ್ಯಾಚ್ ಜಮ್ಮುವಿನ ಮೂಲ ಶಿಬಿರದಿಂದ ತೆರಳಲು ಪ್ರಾರಂಭಿಸಿವೆ.</p>.<p><br /><br />ಜುಲೈ 8ರಂದು ಪವಿತ್ರ ಗುಹೆಯ ಸಮೀಪ ಉಂಟಾದ ದಿಢೀರ್ ಪ್ರವಾಹದಿಂದಾಗಿ ಶಿಬಿರಗಳಲ್ಲಿ ತಂಗಿದ್ದ ಯಾತ್ರಿಕರಲ್ಲಿ 16 ಜನರು ಮೃತಪಟ್ಟು, ಸುಮಾರು 40 ಮಂದಿ ನಾಪತ್ತೆಯಾಗಿದ್ದಾರೆ.</p>.<p>ಅಮರನಾಥ ಕ್ಷೇತ್ರದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಆದರೆ ಬದುಕುಳಿಯುವ ಸಾಧ್ಯತೆ ಕ್ಷೀಣವಾಗಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮ್ಮು: ದಕ್ಷಿಣ ಕಾಶ್ಮೀರದ ಪವಿತ್ರ ಗುಹಾಲಯದ ಸಮೀಪದಲ್ಲಿ ಶುಕ್ರವಾರ ಉಂಟಾದ ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದಅಮರನಾಥ ಯಾತ್ರೆ ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದೆ.</p>.<p>ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/heavy-rains-landslides-water-level-in-reservoirs-rise-953281.html" itemprop="url">ಮಳೆ ತೀವ್ರ: ಭೂಕುಸಿತ, ಜಲಾಶಯಗಳ ನೀರಿನ ಮಟ್ಟ ಏರಿಕೆ </a></p>.<p>ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು.</p>.<p>ಈಗ ತೀರ್ಥಯಾತ್ರೆ ಪುನರಾರಂಭವಾಗಿದ್ದು, ಅಮರನಾಥ ಯಾತ್ರಿಕರ ಹೊಸ ಬ್ಯಾಚ್ ಜಮ್ಮುವಿನ ಮೂಲ ಶಿಬಿರದಿಂದ ತೆರಳಲು ಪ್ರಾರಂಭಿಸಿವೆ.</p>.<p><br /><br />ಜುಲೈ 8ರಂದು ಪವಿತ್ರ ಗುಹೆಯ ಸಮೀಪ ಉಂಟಾದ ದಿಢೀರ್ ಪ್ರವಾಹದಿಂದಾಗಿ ಶಿಬಿರಗಳಲ್ಲಿ ತಂಗಿದ್ದ ಯಾತ್ರಿಕರಲ್ಲಿ 16 ಜನರು ಮೃತಪಟ್ಟು, ಸುಮಾರು 40 ಮಂದಿ ನಾಪತ್ತೆಯಾಗಿದ್ದಾರೆ.</p>.<p>ಅಮರನಾಥ ಕ್ಷೇತ್ರದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಆದರೆ ಬದುಕುಳಿಯುವ ಸಾಧ್ಯತೆ ಕ್ಷೀಣವಾಗಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>