ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆಯ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣ ಸಂಬಂಧ ಬಂಧಿತರಾಗಿರುವ ಪೊಲೀಸ್ ಅಧಿಕಾರಿ ರಿಯಾಜ್ ಖಾಜಿ (ಸೇವೆಯಿಂದ ಅಮಾನತುಗೊಂಡಿದ್ದಾರೆ) ಅವರನ್ನು ಕೋರ್ಟ್ ಇದೇ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಎಸಿಪಿ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಏಪ್ರಿಲ್ 11ರಂದು ಬಂಧಿಸಿತ್ತು. ತನಿಖಾ ಸಂಸ್ಥೆಯು ತನ್ನ ವಶಕ್ಕೆ ನೀಡಲು ಮನವಿ ಮಾಡದ ಕಾರಣ ಕೋರ್ಟ್, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪ್ರಕರಣದ ಪ್ರಮುಖ ಆರೋಪಿ ಸಚಿನ್ ವಾಜೆ ಅವರ ಜೊತೆಗೂಡಿ ಸಂಚು ನಡೆಸಿದ ಆರೋಪ ಅವರ ಮೇಲಿದೆ.