<p><strong>ಮುಂಬೈ:</strong> ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಶಕ್ಕೆ ಒಪ್ಪಿಸಿದ್ದ ಅವಧಿಯನ್ನು ಏಪ್ರಿಲ್ 9ರವರೆಗೂ ವಿಸ್ತರಿಸಿದೆ.</p>.<p>ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಹಾಗೂ ಉದ್ಯಮಿ ಮನ್ಸುಖ್ ಹಿರೇನ್ ಅನುಮಾನಸ್ಪದ ಸಾವಿನ ಪ್ರಕರಣದ ಸಂಬಂಧ ವಾಜೆ ಅವರನ್ನು ಮಾರ್ಚ್ 13ರಂದು ಎನ್ಐಎ ಬಂಧಿಸಿತ್ತು.</p>.<p>ಬುಧವಾರ ವಾಜೆ ಅವರನ್ನು ವಿಶೇಷ ಎನ್ಐಎ ನ್ಯಾಯಾಲಯ ಮುಂದೆ ಹಾಜರುಪಡಿಸಲಾಗಿತ್ತು. ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಾಗಿರುವುದರಿಂದ ತಮ್ಮ ವಶಕ್ಕೆ ಒಪ್ಪಿಸಿರುವ ಅವಧಿಯನ್ನು ವಿಸ್ತರಿಸುವಂತೆ ಎನ್ಐಎ ಕೋರಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಪಿ.ಆರ್. ಸಿತ್ರೆ ಅವರು, ಏಪ್ರಿಲ್ 9ರವರೆಗೆ ವಾಜೆ ಅವರನ್ನು ಎನ್ಐಎ ವಶಕ್ಕೆ ಒಪ್ಪಿಸಿದರು.</p>.<p>ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಅಮಾನತುಗೊಂಡಿರುವ ಪೊಲೀಸ್ ಕಾನ್ಸ್ಟೆಬಲ್ ವಿನಾಯಕ್ ಶಿಂಧೆ ಮತ್ತು ಕ್ರಿಕೆಟ್ ಬೂಕಿ ನರೇಶ್ ಗೊರ್ ಅವರನ್ನು ಮತ್ತೆ 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.</p>.<p>ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ವಾಜೆ ಅವರನ್ನು ವಿಚಾರಣೆ ನಡೆಸಲು ಸಹ ಸಿಬಿಐಗೆ ನ್ಯಾಯಾಲಯ ಅನುಮತಿ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಶಕ್ಕೆ ಒಪ್ಪಿಸಿದ್ದ ಅವಧಿಯನ್ನು ಏಪ್ರಿಲ್ 9ರವರೆಗೂ ವಿಸ್ತರಿಸಿದೆ.</p>.<p>ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಹಾಗೂ ಉದ್ಯಮಿ ಮನ್ಸುಖ್ ಹಿರೇನ್ ಅನುಮಾನಸ್ಪದ ಸಾವಿನ ಪ್ರಕರಣದ ಸಂಬಂಧ ವಾಜೆ ಅವರನ್ನು ಮಾರ್ಚ್ 13ರಂದು ಎನ್ಐಎ ಬಂಧಿಸಿತ್ತು.</p>.<p>ಬುಧವಾರ ವಾಜೆ ಅವರನ್ನು ವಿಶೇಷ ಎನ್ಐಎ ನ್ಯಾಯಾಲಯ ಮುಂದೆ ಹಾಜರುಪಡಿಸಲಾಗಿತ್ತು. ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಾಗಿರುವುದರಿಂದ ತಮ್ಮ ವಶಕ್ಕೆ ಒಪ್ಪಿಸಿರುವ ಅವಧಿಯನ್ನು ವಿಸ್ತರಿಸುವಂತೆ ಎನ್ಐಎ ಕೋರಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಪಿ.ಆರ್. ಸಿತ್ರೆ ಅವರು, ಏಪ್ರಿಲ್ 9ರವರೆಗೆ ವಾಜೆ ಅವರನ್ನು ಎನ್ಐಎ ವಶಕ್ಕೆ ಒಪ್ಪಿಸಿದರು.</p>.<p>ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಅಮಾನತುಗೊಂಡಿರುವ ಪೊಲೀಸ್ ಕಾನ್ಸ್ಟೆಬಲ್ ವಿನಾಯಕ್ ಶಿಂಧೆ ಮತ್ತು ಕ್ರಿಕೆಟ್ ಬೂಕಿ ನರೇಶ್ ಗೊರ್ ಅವರನ್ನು ಮತ್ತೆ 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.</p>.<p>ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ವಾಜೆ ಅವರನ್ನು ವಿಚಾರಣೆ ನಡೆಸಲು ಸಹ ಸಿಬಿಐಗೆ ನ್ಯಾಯಾಲಯ ಅನುಮತಿ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>