<div class="content"><div class="title"><strong>ನವದೆಹಲಿ</strong>: ಚೀನಾದೊಂದಿಗಿನ ಗಡಿ ಸಂಘರ್ಷ ಮುಂದುವರಿದಿದ್ದು, ಯಾವುದೇ ಸಂಭವನೀಯ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಿ ಎಂದು ಕಮಾಂಡರ್ಗಳಿಗೆ ಭಾರತೀಯ ಸೇನೆಯ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಸೂಚಿಸಿದ್ದಾರೆ.</div><div class="title"></div><div class="title">ಅರುಣಾಚಲ ಪ್ರದೇಶದ ತೇಜ್ಪುರ ಸೇನಾ ನೆಲೆಗೆ ಭೇಟಿ ನೀಡಿದ್ದ ವೇಳೆ ಈ ರೀತಿ ಹೇಳಿದ್ದಾರೆ.‘ಸಂಭವನೀಯ ಪರಿಸ್ಥಿತಿಗೆಸಜ್ಜಾಗಿರುವಂತೆ ಸೇನೆಯ ಮುಖ್ಯಸ್ಥರು ಕಮಾಂಡರ್ಗಳಿಗೆ ಸೂಚಿಸಿದ್ದಾರೆ ಮತ್ತು ಉನ್ನತ ಮಟ್ಟದ ಕಾರ್ಯಾಚರಣೆಯನ್ನು ಮುಂದುವರಿಸುವಂತೆ ತಿಳಿಸಿದ್ದಾರೆ’ ಎಂದು ಸೇನೆಯ ಮೂಲಗಳು ತಿಳಿಸಿವೆ.</div><div class="title"></div><div class="title">ಗಡಿ ಪ್ರದೇಶಕ್ಕೆಎರಡು ದಿನಗಳ ಭೇಟಿ ಕೈಗೊಂಡಿರುವ ನರವಾಣೆ ಅವರಿಗೆ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಭಾರತ–ಚೀನಾ ಸೇನೆ ನಿಯೋಜನೆ ಬಗ್ಗೆ ಮಾಹಿತಿ ನೀಡಲಾಯಿತು.</div><div class="title"></div><div class="title">ಚೀನಾ ಸೇನೆಯು ಯುದ್ಧಕ್ಕಾಗಿ ಯೋಜಿಸಿರುವಂತೆಗಡಿಯಲ್ಲಿ ನಾಲ್ಕೈದು ಸಶಸ್ತ್ರ ಬ್ರಿಗೇಡ್ಗಳನ್ನು ನಿರ್ಮಿಸಿದೆ.ಪೂರ್ವ ಲಡಾಖ್ನ ಎಲ್ಎಸಿ ಬಳಿ ಭಾರಿ ಪ್ರಮಾಣದಲ್ಲಿ ಸೈನಿಕರನ್ನು ನಿಯೋಜಿಸಿದೆ. ಇದನ್ನು ನಿಭಾಯಿಸಲು ಭಾರತೀಯ ಸೇನೆಯು 40 ಸಾವಿರ ಸೈನಿಕರನ್ನು ನಿಯೋಜಿಸಿದೆ.ಚೀನಾದ ಸೇನೆಯು ಉತ್ತರಾಖಂಡ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿಯೂಸೇನಾ ಪಡೆಗಳನ್ನು ನಿಯೋಜಿಸಿದೆ.</div><div class="title"></div><div class="title">ಗಡಿಯಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಕಮಾಂಡರ್ಗಳ ಮಟ್ಟದ ಮಾತುಕತೆ ವೇಳೆ ಚೀನಾ ನಿರಾಕರಿಸಿತ್ತು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div class="content"><div class="title"><strong>ನವದೆಹಲಿ</strong>: ಚೀನಾದೊಂದಿಗಿನ ಗಡಿ ಸಂಘರ್ಷ ಮುಂದುವರಿದಿದ್ದು, ಯಾವುದೇ ಸಂಭವನೀಯ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಿ ಎಂದು ಕಮಾಂಡರ್ಗಳಿಗೆ ಭಾರತೀಯ ಸೇನೆಯ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಸೂಚಿಸಿದ್ದಾರೆ.</div><div class="title"></div><div class="title">ಅರುಣಾಚಲ ಪ್ರದೇಶದ ತೇಜ್ಪುರ ಸೇನಾ ನೆಲೆಗೆ ಭೇಟಿ ನೀಡಿದ್ದ ವೇಳೆ ಈ ರೀತಿ ಹೇಳಿದ್ದಾರೆ.‘ಸಂಭವನೀಯ ಪರಿಸ್ಥಿತಿಗೆಸಜ್ಜಾಗಿರುವಂತೆ ಸೇನೆಯ ಮುಖ್ಯಸ್ಥರು ಕಮಾಂಡರ್ಗಳಿಗೆ ಸೂಚಿಸಿದ್ದಾರೆ ಮತ್ತು ಉನ್ನತ ಮಟ್ಟದ ಕಾರ್ಯಾಚರಣೆಯನ್ನು ಮುಂದುವರಿಸುವಂತೆ ತಿಳಿಸಿದ್ದಾರೆ’ ಎಂದು ಸೇನೆಯ ಮೂಲಗಳು ತಿಳಿಸಿವೆ.</div><div class="title"></div><div class="title">ಗಡಿ ಪ್ರದೇಶಕ್ಕೆಎರಡು ದಿನಗಳ ಭೇಟಿ ಕೈಗೊಂಡಿರುವ ನರವಾಣೆ ಅವರಿಗೆ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಭಾರತ–ಚೀನಾ ಸೇನೆ ನಿಯೋಜನೆ ಬಗ್ಗೆ ಮಾಹಿತಿ ನೀಡಲಾಯಿತು.</div><div class="title"></div><div class="title">ಚೀನಾ ಸೇನೆಯು ಯುದ್ಧಕ್ಕಾಗಿ ಯೋಜಿಸಿರುವಂತೆಗಡಿಯಲ್ಲಿ ನಾಲ್ಕೈದು ಸಶಸ್ತ್ರ ಬ್ರಿಗೇಡ್ಗಳನ್ನು ನಿರ್ಮಿಸಿದೆ.ಪೂರ್ವ ಲಡಾಖ್ನ ಎಲ್ಎಸಿ ಬಳಿ ಭಾರಿ ಪ್ರಮಾಣದಲ್ಲಿ ಸೈನಿಕರನ್ನು ನಿಯೋಜಿಸಿದೆ. ಇದನ್ನು ನಿಭಾಯಿಸಲು ಭಾರತೀಯ ಸೇನೆಯು 40 ಸಾವಿರ ಸೈನಿಕರನ್ನು ನಿಯೋಜಿಸಿದೆ.ಚೀನಾದ ಸೇನೆಯು ಉತ್ತರಾಖಂಡ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿಯೂಸೇನಾ ಪಡೆಗಳನ್ನು ನಿಯೋಜಿಸಿದೆ.</div><div class="title"></div><div class="title">ಗಡಿಯಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಕಮಾಂಡರ್ಗಳ ಮಟ್ಟದ ಮಾತುಕತೆ ವೇಳೆ ಚೀನಾ ನಿರಾಕರಿಸಿತ್ತು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>