<p><strong>ನವದೆಹಲಿ/ಚೆನ್ನೈ</strong>: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷ ಹಾಗೂ ರಾಜ್ಯಪಾಲ ಆರ್.ಎನ್.ರವಿ ನಡುವಣ ತಿಕ್ಕಾಟ ಮತ್ತೊಂದು ಮಗ್ಗುಲಿಗೆ ಹೊರಳಿದೆ.</p>.<p>ಸಂಸದರಾದ ಟಿ.ಆರ್.ಬಾಲು, ಎ.ರಾಜಾ, ಪಿ.ವಿಲ್ಸನ್ ಹಾಗೂ ತಮಿಳುನಾಡಿನ ಕಾನೂನು ಸಚಿವ ಎಸ್.ರಘುಪತಿ ಅವರನ್ನೊಳಗೊಂಡ ನಿಯೋಗವು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜ್ಯಪಾಲರ ವಿರುದ್ಧ ದೂರು ಸಲ್ಲಿಸಿದೆ. ರವಿ ಅವರು ಜನವರಿ 9ರಂದು ಸದನವನ್ನು ಉದ್ದೇಶಿಸಿ ಮಾತನಾಡುವಾಗ ಸಂವಿಧಾನದ ನಡಾವಳಿಗಳು ಹಾಗೂ ಸದನದ ನಿಯಮಾವಳಿಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ನಿಯೋಗವು ರಾಷ್ಟ್ರಪತಿಯವರಿಗೆ ತಿಳಿಸಿದೆ.</p>.<p>‘ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರಪತಿಯವರಿಗೆ ಬರೆದಿದ್ದ ಪತ್ರವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಆ ಪತ್ರದಲ್ಲಿ ಏನಿದೆ ಎಂಬುದು ಮುಖ್ಯಮಂತ್ರಿಯವರಿಗಷ್ಟೇ ಗೊತ್ತು’ ಎಂದು ಟಿ.ಆರ್.ಬಾಲು ತಿಳಿಸಿದ್ದಾರೆ.</p>.<p>‘ಸ್ಟಾಲಿನ್ ಅವರು ಹಂಚಿಕೊಂಡಿದ್ದ ಮಾಹಿತಿಯನ್ನೆಲ್ಲಾ ರಾಷ್ಟ್ರಪತಿಯವರಿಗೆ ವಿವರಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನೂ ಮಾಡಿದ್ದೇವೆ. ಈ ಕುರಿತು ಪರಿಶೀಲನೆ ನಡೆಸುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.</p>.<p>ರವಿ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಜಾಗೊಳಿಸುವಂತೆ ಡಿಎಂಕೆ ಮೈತ್ರಿಕೂಟವು ಕಳೆದ ವರ್ಷದ ನವೆಂಬರ್ನಲ್ಲಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿತ್ತು. ರವಿ ವಿರುದ್ಧ ಅನೇಕ ಆರೋಪಗಳನ್ನೂ ಮಾಡಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಬಾಲು, ‘ನವೆಂಬರ್ನಲ್ಲಿ ಸಲ್ಲಿಸಿದ್ದ ಪತ್ರ ರಾಜಕೀಯ ಹಿತಾಸಕ್ತಿಯದ್ದಾಗಿತ್ತು. ಆದರೆ ಈಗ ಸರ್ಕಾರದಿಂದಲೇ ಪತ್ರ ರವಾನಿಸಲಾಗಿದೆ’ ಎಂದಿದ್ದಾರೆ.</p>.<p>‘ರವಿ ಅವರು ತಮಿಳುನಾಡಿನಲ್ಲಿ ಆರ್ಎಸ್ಎಸ್ನ ಸನಾತನ ನೀತಿಗಳನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಇ.ವಿ.ರಾಮಸ್ವಾಮಿ ಪೆರಿಯಾರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ ಹಾಗೂ ಎಂ.ಕರುಣಾನಿಧಿ ಅವರಂತಹ ದ್ರಾವಿಡ ನೇತಾರರು ಜನಿಸಿದ್ದ ನೆಲದಲ್ಲಿ ರವಿ ಅವರ ಪ್ರಯತ್ನ ಫಲಿಸುವುದಿಲ್ಲ. ರಾಜ್ಯಪಾಲರು ರಾಷ್ಟ್ರಗೀತೆಗೂ ಮುನ್ನವೇ ಸದನ ತೊರೆಯುವ ಮೂಲಕ ಅದಕ್ಕೆ ಅಪಮಾನ ಮಾಡಿದ್ದಾರೆ. ತಮಿಳುನಾಡಿನ ಜನರನ್ನೂ ಅವಮಾನಿಸಿದ್ದಾರೆ’ ಎಂದು ಹರಿಹಾಯ್ದಿದ್ದಾರೆ.</p>.<p>‘ರವಿ ಅವರು ಉದ್ದೇಶಪೂರ್ವಕವಾಗಿಯೇ ತಮಿಳುನಾಡು ಬದಲು ತಮಿಳಗಂ ಎಂಬ ಪದ ಪ್ರಯೋಗಿಸುತ್ತಿದ್ದಾರೆ. ಅದನ್ನು ನಾವು ಒಪ್ಪುವುದಿಲ್ಲ’ ಎಂದಿದ್ದಾರೆ.</p>.<p>ರವಿ ಅವರು ಇದೇ 13ರಂದು ನವದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಚೆನ್ನೈ</strong>: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷ ಹಾಗೂ ರಾಜ್ಯಪಾಲ ಆರ್.ಎನ್.ರವಿ ನಡುವಣ ತಿಕ್ಕಾಟ ಮತ್ತೊಂದು ಮಗ್ಗುಲಿಗೆ ಹೊರಳಿದೆ.</p>.<p>ಸಂಸದರಾದ ಟಿ.ಆರ್.ಬಾಲು, ಎ.ರಾಜಾ, ಪಿ.ವಿಲ್ಸನ್ ಹಾಗೂ ತಮಿಳುನಾಡಿನ ಕಾನೂನು ಸಚಿವ ಎಸ್.ರಘುಪತಿ ಅವರನ್ನೊಳಗೊಂಡ ನಿಯೋಗವು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜ್ಯಪಾಲರ ವಿರುದ್ಧ ದೂರು ಸಲ್ಲಿಸಿದೆ. ರವಿ ಅವರು ಜನವರಿ 9ರಂದು ಸದನವನ್ನು ಉದ್ದೇಶಿಸಿ ಮಾತನಾಡುವಾಗ ಸಂವಿಧಾನದ ನಡಾವಳಿಗಳು ಹಾಗೂ ಸದನದ ನಿಯಮಾವಳಿಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ನಿಯೋಗವು ರಾಷ್ಟ್ರಪತಿಯವರಿಗೆ ತಿಳಿಸಿದೆ.</p>.<p>‘ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರಪತಿಯವರಿಗೆ ಬರೆದಿದ್ದ ಪತ್ರವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಆ ಪತ್ರದಲ್ಲಿ ಏನಿದೆ ಎಂಬುದು ಮುಖ್ಯಮಂತ್ರಿಯವರಿಗಷ್ಟೇ ಗೊತ್ತು’ ಎಂದು ಟಿ.ಆರ್.ಬಾಲು ತಿಳಿಸಿದ್ದಾರೆ.</p>.<p>‘ಸ್ಟಾಲಿನ್ ಅವರು ಹಂಚಿಕೊಂಡಿದ್ದ ಮಾಹಿತಿಯನ್ನೆಲ್ಲಾ ರಾಷ್ಟ್ರಪತಿಯವರಿಗೆ ವಿವರಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನೂ ಮಾಡಿದ್ದೇವೆ. ಈ ಕುರಿತು ಪರಿಶೀಲನೆ ನಡೆಸುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.</p>.<p>ರವಿ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಜಾಗೊಳಿಸುವಂತೆ ಡಿಎಂಕೆ ಮೈತ್ರಿಕೂಟವು ಕಳೆದ ವರ್ಷದ ನವೆಂಬರ್ನಲ್ಲಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿತ್ತು. ರವಿ ವಿರುದ್ಧ ಅನೇಕ ಆರೋಪಗಳನ್ನೂ ಮಾಡಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಬಾಲು, ‘ನವೆಂಬರ್ನಲ್ಲಿ ಸಲ್ಲಿಸಿದ್ದ ಪತ್ರ ರಾಜಕೀಯ ಹಿತಾಸಕ್ತಿಯದ್ದಾಗಿತ್ತು. ಆದರೆ ಈಗ ಸರ್ಕಾರದಿಂದಲೇ ಪತ್ರ ರವಾನಿಸಲಾಗಿದೆ’ ಎಂದಿದ್ದಾರೆ.</p>.<p>‘ರವಿ ಅವರು ತಮಿಳುನಾಡಿನಲ್ಲಿ ಆರ್ಎಸ್ಎಸ್ನ ಸನಾತನ ನೀತಿಗಳನ್ನು ಹೇರಲು ಪ್ರಯತ್ನಿಸುತ್ತಿದ್ದಾರೆ. ಇ.ವಿ.ರಾಮಸ್ವಾಮಿ ಪೆರಿಯಾರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ ಹಾಗೂ ಎಂ.ಕರುಣಾನಿಧಿ ಅವರಂತಹ ದ್ರಾವಿಡ ನೇತಾರರು ಜನಿಸಿದ್ದ ನೆಲದಲ್ಲಿ ರವಿ ಅವರ ಪ್ರಯತ್ನ ಫಲಿಸುವುದಿಲ್ಲ. ರಾಜ್ಯಪಾಲರು ರಾಷ್ಟ್ರಗೀತೆಗೂ ಮುನ್ನವೇ ಸದನ ತೊರೆಯುವ ಮೂಲಕ ಅದಕ್ಕೆ ಅಪಮಾನ ಮಾಡಿದ್ದಾರೆ. ತಮಿಳುನಾಡಿನ ಜನರನ್ನೂ ಅವಮಾನಿಸಿದ್ದಾರೆ’ ಎಂದು ಹರಿಹಾಯ್ದಿದ್ದಾರೆ.</p>.<p>‘ರವಿ ಅವರು ಉದ್ದೇಶಪೂರ್ವಕವಾಗಿಯೇ ತಮಿಳುನಾಡು ಬದಲು ತಮಿಳಗಂ ಎಂಬ ಪದ ಪ್ರಯೋಗಿಸುತ್ತಿದ್ದಾರೆ. ಅದನ್ನು ನಾವು ಒಪ್ಪುವುದಿಲ್ಲ’ ಎಂದಿದ್ದಾರೆ.</p>.<p>ರವಿ ಅವರು ಇದೇ 13ರಂದು ನವದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>