ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ರಾಜಕೀಯ ಬಿಕ್ಕಟ್ಟು: ಪ್ರಮುಖ ನಾಯಕರನ್ನು ದೆಹಲಿಗೆ ಕರೆದ ಬಿಜೆಪಿ

Last Updated 8 ಆಗಸ್ಟ್ 2022, 15:04 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರದಲ್ಲಿ ರಾಜಕೀಯ ಗದ್ದಲ ತೀವ್ರಗೊಳ್ಳುವ ಸುಳಿವಿನ ಮಧ್ಯೆಯೇ ಬಿಜೆಪಿ ತನ್ನ ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ಸೂಚಿಸಿದೆ.

ಪರಿಸ್ಥಿತಿಯ ಬಗ್ಗೆ ಅವಲೋಕಿಸಿ ಸೂಕ್ತ ಕಾರ್ಯತಂತ್ರ ರೂಪಿಸಿಕೊಳ್ಳಲು ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ.

ರವಿಶಂಕರ್ ಪ್ರಸಾದ್, ಶಹನವಾಜ್ ಹುಸೇನ್, ನಿತಿನ್ ನವೀನ್, ಸತೀಶ್ ಚಂದ್ರ ದುಬೆ ಅವರು ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಬಿಹಾರದಲ್ಲಿ ಆಡಳಿತಾರೂಢ ಜೆಡಿ(ಯು), ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಹಾಗೂ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಮಂಗಳವಾರ ಪ್ರತ್ಯೇಕವಾಗಿ ಶಾಸಕರ ಸಭೆ ಕರೆದಿವೆ. ಶಾಸಕರು, ಸಂಸದರು, ಎಂಎಲ್‌ಸಿ ಹಾಗೂ ಪಕ್ಷದ ನಾಯಕರ ಸಭೆ ಕರೆದಿರುವುದನ್ನು ಜೆಡಿ(ಯು) ರಾಷ್ಟ್ರೀಯ ಅಧ್ಯಕ್ಷ ರಾಜೀವ್ ಸಿಂಗ್ ಖಚಿತಪಡಿಸಿದ್ದಾರೆ.

ಬಿಹಾರದಲ್ಲಿ ಜೆಡಿ(ಯು) ಪಕ್ಷಕ್ಕೆ ಆರ್‌.ಸಿ.ಪಿ. ಸಿಂಗ್‌ ರಾಜೀನಾಮೆ ಸಲ್ಲಿಸಿದ ಬಳಿಕ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಾಗಿವೆ. ಇದೇ ಕಾರಣಕ್ಕೆ ರಾಜಕೀಯ ಪಕ್ಷಗಳು ಸಭೆ ಆಯೋಜಿಸಿವೆ ಎನ್ನಲಾಗಿದೆ.

ಈ ಮಧ್ಯೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ, ನಿತೀಶ್ ಕುಮಾರ್ ಅವರು ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡರೆ ಅವರ ಜೆಡಿ(ಯು) ಪಕ್ಷವನ್ನು ಅಪ್ಪಿಕೊಳ್ಳಲು ಸಿದ್ಧ ಎಂದು ಪ್ರತಿಪಕ್ಷ ಆರ್‌ಜೆಡಿ ಸೋಮವಾರ ಹೇಳಿದೆ.

ಭಿನ್ನಾಭಿಪ್ರಾಯವಿಲ್ಲ ಎಂದ ಉಮೇಶ್ ಕುಶ್ವಾಹ

ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರ ಸುಗಮವಾಗಿ ಮುನ್ನಡೆಯುತ್ತಿದೆ. ನಮಗೆ ಬಿಜೆಪಿ ಜತೆ ಯಾವುದೇ ಭಿನ್ನಭಿಪ್ರಾಯವಿಲ್ಲ ಎಂದು ಜೆಡಿ(ಯು) ರಾಜ್ಯ ಘಟಕದ ಅಧ್ಯಕ್ಷ ಉಮೇಶ್ ಕುಶ್ವಾಹ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT