ವಿರೋಧ ಪಕ್ಷ ಬಿಜೆಪಿಯ ಶಾಸಕರು ಅಧಿವೇಶನದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ಮಸೂದೆ ಮಂಡಿಸುವ ಸರ್ಕಾರದ ಪ್ರಯತ್ನವನ್ನು ವಿರೋಧಿಸಲಾಗುವುದು ಎಂದು ಬಿಜೆಪಿಯ ಮುಖಂಡರು ಹೇಳಿದ್ದಾರೆ.
ಯುಪಿಎ ಮೈತ್ರಿಕೂಟದ ಶಾಸಕರನ್ನು ಬಿಜೆಪಿ ಸೆಳೆಯುವ ಭೀತಿ ಇದ್ದ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 30ರಂದು ಛತ್ತೀಸ್ಗಡದ ರಾಯಪುರ ಸಮೀಪದ ರೆಸಾರ್ಟ್ಗೆ ಸ್ಥಳಾಂತರಿಸಲಾಗಿತ್ತು.
ಗಣಿಗಾರಿಕೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊರೇನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗಸ್ಟ್ 25ರಂದು ಚುನಾವಣಾ ಆಯೋಗವು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ ಎಂದು ವರದಿಯಾಗಿತ್ತು.
ಇದು ಇನ್ನೂ ಅಧಿಕೃತವಾಗದಿದ್ದರೂ ಜಾರ್ಖಂಡ್ ರಾಜಕಾರಣದಲ್ಲಿ ಅನಿಶ್ಚಿತತೆಗೆ ಕಾರಣವಾಗಿದೆ.