ನವದೆಹಲಿ: ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿರುವ ಬೆನ್ನಲ್ಲೇ ಎನ್ಸಿಪಿ ಮುಖಂಡರಾದ ಸುಪ್ರಿಯಾ ಸುಳೆ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಪ್ರಿಯಾ ಸುಳೆ, ‘ನಿಮ್ಮ ಅಮೂಲ್ಯ ಮಾರ್ಗದರ್ಶನಕ್ಕಾಗಿ ಧನ್ಯವಾದಗಳು. ನಿಮ್ಮೊಂದಿಗೆ (ಸೋನಿಯಾ ಗಾಂಧಿ) ಸಂವಹನ ನಡೆಸುವುದಕ್ಕೆ ಸಂತಸವಾಗುತ್ತದೆ‘ ಎಂದು ಉಲ್ಲೇಖಿಸಿದ್ದಾರೆ.