ನಿಲುವಳಿ ಮಂಡನೆ ಬಳಿಕ ಮಾತನಾಡಿದ್ದ ಮಮತಾ, ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ) ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡ ಇದೆ ಎಂಬುದಾಗಿ ಭಾವಿಸುವುದಿಲ್ಲ. ಬಿಜೆಪಿಯ ಕೆಲವು ನಾಯಕರು ತಮ್ಮ ಹಿತಾಸಕ್ತಿಗಾಗಿ ಕೇಂದ್ರ ಸಂಸ್ಥೆಗಳ ದುರುಪಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಇದರ ರಾಜಕೀಯ ಮಹತ್ವ ಏನೆಂದು ಮಮತಾ ಮಾತ್ರ ಹೇಳಬಲ್ಲರು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸುಗತ ರಾಯ್ ಹೇಳಿದ್ದರು. ಇದಕ್ಕೆ ಮಾಳವೀಯ ತಿರುಗೇಟು ನೀಡಿದ್ದಾರೆ.