ಕೋಲ್ಕತ್ತದಲ್ಲಿ ಬಿಜೆಪಿ ಕಾರ್ಯಕರ್ತ ಸಾವು: ಸಿಬಿಐ ತನಿಖೆಗೆ ಅಮಿತ್ ಶಾ ಆಗ್ರಹ

ಕೋಲ್ಕತ್ತ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ.
ಉತ್ತರ ಕೋಲ್ಕತ್ತದ ಕಾಶಿಪುರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಚೌರಾಸಿಯಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೊಂದು ಕೊಲೆ ಪ್ರಕರಣ, ಟಿಎಂಸಿಯೇ ಹತ್ಯೆ ಮಾಡಿದೆ ಎಂದು ಬಿಜೆಪಿ ದೂರಿದೆ. ಆದರೆ ಈ ಆರೋಪವನ್ನು ಟಿಎಂಸಿ ನಿರಾಕರಿಸಿದೆ.
ಅಮಿತ್ ಶಾ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದು, ಶುಕ್ರವಾರ ಮಧ್ಯಾಹ್ನ ಚೌರಾಸಿಯಾ ಮನೆಗೆ ಭೇಟಿ ನೀಡಿದರು.
ಕೋಲ್ಕತ್ತದಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ: ಟಿಎಂಸಿ ವಿರುದ್ಧ ಕೊಲೆ ಆರೋಪ
ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ‘ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬಿಜೆಪಿ ಬಯಸುತ್ತದೆ. ಮೂರನೇ ಬಾರಿ ಅಧಿಕಾರ ವಹಿಸಿಕೊಂಡ ವರ್ಷಾಚರಣೆಯನ್ನು ಟಿಎಂಸಿ ನಿನ್ನೆಯಷ್ಟೇ ಸಂಭ್ರಮಿಸಿತ್ತು. ಇದೀಗ ಚೌರಾಸಿಯಾ ಅವರ ಹತ್ಯೆಯಾಗಿದೆ’ ಎಂದು ಹೇಳಿದ್ದಾರೆ.
‘ಚೌರಾಸಿಯಾ ಸಾವನ್ನು ಕೇಂದ್ರ ಗೃಹ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರವಾಗಿ ರಾಜ್ಯದಿಂದ ವರದಿ ಕೇಳಿದೆ’ ಎಂದೂ ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.