ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಅವರು ರಾಜ್ಯವ್ಯಾಪಿ ಕೈಗೊಂಡಿರುವ ‘ವಿಜಯ ಯಾತ್ರೆ’ಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕೇರಳಕ್ಕೆ ಕೇಂದ್ರ ಸರ್ಕಾರ ನೀಡಿರುವ ಕೊಡುಗೆಗಳನ್ನು ಪಟ್ಟಿ ಮಾಡಿದರು. ಸ್ವಾವಲಂಬಿ ಹೊಸ ಕೇರಳವನ್ನು ನಿರ್ಮಿಸುವ ಗುರಿಯನ್ನು ಬಿಜೆಪಿ ಹೊಂದಿದ್ದು, ಅವಕಾಶ ನೀಡುವಂತೆ ಮನವಿ ಮಾಡಿದರು.