<p><strong>ಪೂರ್ಣಿಯಾ (ಬಿಹಾರ):</strong> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿಯಾಗುವ ಆಸೆಯಿಂದ ಬಿಜೆಪಿಯ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರಿದರು.</p>.<p>ಬಿಹಾರದ ಪೂರ್ಣಿಯಾದಲ್ಲಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ನಿತೀಶ್ ಅವರು 2014ರಲ್ಲಿಯೂ ಹೀಗೆಯೇ ಮಾಡಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಜನತೆ ‘ಮಹಾ ಮೈತ್ರಿ’ಗೆ ತಕ್ಕ ಪಾಠ ಕಲಿಸಲಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರೆಯಲಿದ್ದು, ಸರ್ಕಾರ ರಚಿಸಲಿದೆ ಎಂದು ಶಾ ಹೇಳಿರುವುದಾಗಿ ‘ಪಿಟಿಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.</p>.<p><a href="https://www.prajavani.net/india-news/kerala-hc-takes-suo-motu-case-against-pfi-hartal-974409.html" itemprop="url">ಕೇರಳ ಬಂದ್: ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ </a></p>.<p>‘ಸ್ವಾರ್ಥ ಮತ್ತು ಅಧಿಕಾರದ ರಾಜಕಾರಣಕ್ಕೆ ಬದಲಾಗಿ ನಾವು ಸೇವೆ ಮತ್ತು ಅಭಿವೃದ್ಧಿಯ ರಾಜಕಾರಣದಲ್ಲಿ ನಂಬಿಕೆ ಇರಿಸಿದ್ದೇವೆ’ ಎಂದು ಅವರು ಹೇಳಿದರು.</p>.<p><strong>‘ಲಾಲು ಮಡಿಲಲ್ಲಿ ಕುಳಿತವರಿಗೆ ಜನರಿಂದ ಪಾಠ’</strong></p>.<p>‘ಬಿಜೆಪಿಯ ಬೆನ್ನಿಗೆ ಚೂರಿ ಹಾಕಿರುವ ನಿತೀಶ್ ಕುಮಾರ್ ಈಗ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಮಡಿಲಲ್ಲಿ ಕುಳಿತಿದ್ದಾರೆ. ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡಲಿದೆ’ ಎಂದು ಶಾ ಹೇಳಿದರು.</p>.<p><a href="https://www.prajavani.net/india-news/pfi-bandh-against-nia-ed-raids-in-kerala-turns-violent-974405.html" itemprop="url">ಕೇರಳ: ಹಿಂಸಾರೂಪಕ್ಕೆ ತಿರುಗಿದ ಪಿಎಫ್ಐ ಬಂದ್– ಕೆಎಸ್ಆರ್ಟಿಸಿ ಬಸ್ ಧ್ವಂಸ </a></p>.<p>‘ಈಗ ಇಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆದರೆ, ಭಯಪಡುವ ಅಗತ್ಯವಿಲ್ಲ ಎಂಬುದಾಗಿ ಹೇಳಲು ಬಯಸುತ್ತೇನೆ. ನಿಮ್ಮೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವಿದೆ’ ಎಂದು ಶಾ ಹೇಳಿರುವುದಾಗಿ ಬಿಜೆಪಿ ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೂರ್ಣಿಯಾ (ಬಿಹಾರ):</strong> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿಯಾಗುವ ಆಸೆಯಿಂದ ಬಿಜೆಪಿಯ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರಿದರು.</p>.<p>ಬಿಹಾರದ ಪೂರ್ಣಿಯಾದಲ್ಲಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ನಿತೀಶ್ ಅವರು 2014ರಲ್ಲಿಯೂ ಹೀಗೆಯೇ ಮಾಡಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಜನತೆ ‘ಮಹಾ ಮೈತ್ರಿ’ಗೆ ತಕ್ಕ ಪಾಠ ಕಲಿಸಲಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರೆಯಲಿದ್ದು, ಸರ್ಕಾರ ರಚಿಸಲಿದೆ ಎಂದು ಶಾ ಹೇಳಿರುವುದಾಗಿ ‘ಪಿಟಿಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.</p>.<p><a href="https://www.prajavani.net/india-news/kerala-hc-takes-suo-motu-case-against-pfi-hartal-974409.html" itemprop="url">ಕೇರಳ ಬಂದ್: ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ </a></p>.<p>‘ಸ್ವಾರ್ಥ ಮತ್ತು ಅಧಿಕಾರದ ರಾಜಕಾರಣಕ್ಕೆ ಬದಲಾಗಿ ನಾವು ಸೇವೆ ಮತ್ತು ಅಭಿವೃದ್ಧಿಯ ರಾಜಕಾರಣದಲ್ಲಿ ನಂಬಿಕೆ ಇರಿಸಿದ್ದೇವೆ’ ಎಂದು ಅವರು ಹೇಳಿದರು.</p>.<p><strong>‘ಲಾಲು ಮಡಿಲಲ್ಲಿ ಕುಳಿತವರಿಗೆ ಜನರಿಂದ ಪಾಠ’</strong></p>.<p>‘ಬಿಜೆಪಿಯ ಬೆನ್ನಿಗೆ ಚೂರಿ ಹಾಕಿರುವ ನಿತೀಶ್ ಕುಮಾರ್ ಈಗ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಮಡಿಲಲ್ಲಿ ಕುಳಿತಿದ್ದಾರೆ. ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡಲಿದೆ’ ಎಂದು ಶಾ ಹೇಳಿದರು.</p>.<p><a href="https://www.prajavani.net/india-news/pfi-bandh-against-nia-ed-raids-in-kerala-turns-violent-974405.html" itemprop="url">ಕೇರಳ: ಹಿಂಸಾರೂಪಕ್ಕೆ ತಿರುಗಿದ ಪಿಎಫ್ಐ ಬಂದ್– ಕೆಎಸ್ಆರ್ಟಿಸಿ ಬಸ್ ಧ್ವಂಸ </a></p>.<p>‘ಈಗ ಇಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆದರೆ, ಭಯಪಡುವ ಅಗತ್ಯವಿಲ್ಲ ಎಂಬುದಾಗಿ ಹೇಳಲು ಬಯಸುತ್ತೇನೆ. ನಿಮ್ಮೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವಿದೆ’ ಎಂದು ಶಾ ಹೇಳಿರುವುದಾಗಿ ಬಿಜೆಪಿ ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>